ಪ್ರವಾಹ ಪೀಡಿತ ಕೇರಳದಲ್ಲಿ ಕಾಂಗ್ರೆಸ್ ಅಧ್ಯಕ್ಷ: ಭೇಟಿ ವೇಳೆ ಮಾನವೀಯತೆ ಮೆರೆದ ರಾಹುಲ್ 
ದೇಶ

ಪ್ರವಾಹ ಪೀಡಿತ ಕೇರಳದಲ್ಲಿ ರಾಹುಲ್: ಭೇಟಿ ವೇಳೆ ಮಾನವೀಯತೆ ಮೆರೆದ ಕಾಂಗ್ರೆಸ್ ಅಧ್ಯಕ್ಷ

ಭೀಕರ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ಕೇರಳ ರಾಜ್ಯಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಭೇಟಿ ನೀಡಿದ್ದು, ಭೇಟಿ ನವೇಳೆ ರೋಗಿಯೊಬ್ಬರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ...

ತಿರುವನಂತಪುರ: ಭೀಕರ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ಕೇರಳ ರಾಜ್ಯಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಭೇಟಿ ನೀಡಿದ್ದು, ಭೇಟಿ ನವೇಳೆ ರೋಗಿಯೊಬ್ಬರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. 
ಆಲಪ್ಪುಳದ ಚೆಂಗನ್ನೂರು ಕಾಲೇಜು ಹೆಲಿಪ್ಯಾಡ್ ನಲ್ಲಿ ರಾಹುಲ್ ಗಾಂಧಿಯವರು ಆಗಮಿಸಿದ ಸಂದರ್ಭದಲ್ಲಿ ರೋಗಿಯೊಬ್ಬರನ್ನು ಒಯ್ಯಲು ಅದೇ ಸಮಯದಲ್ಲಿ ಏರ್'ಆ್ಯಂಬುಲೆನ್ಸ್ ಬಂದಿದೆ. ಈ ವೇಳೆ ಏರ್ ಆ್ಯಂಬುಲೆನ್ಸ್ ಮೇಲೇರಲು ಬಿಟ್ಟ ರಾಹುಲ್ ಅವರು, ಬಳಿಕ ತಾವು ತೆರಳಿ ಮಾನವೀಯತೆ ಮರೆದಿದ್ದಾರೆ. 
ಹೆಲಿಕಾಪ್ಟರ್ ಏರಲು ಹೊರಟಿದ್ದ ರಾಹುಲ್ ಅವರಿದೆ ಅದೇ ಹೆಲಿಪ್ಯಾಡ್ ನಲ್ಲಿ ಹಾರಾಟಕ್ಕೆ ಸಿದ್ಧವಾಗಿರುವ ಏರ್ ಆ್ಯಂಬುಲೆನ್ಸ್ ಕಂಡು ಬಂದಿತ್ತು. ಕೂಡಲೇ ಭದ್ರತಾ ಸಿಬ್ಬಂದಿಗೆ ಇದರ ಬಗ್ಗೆ ವಿಚಾರಿಸಿದ್ದಾರೆ. ಹೃದಯ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಸಿದ್ದವಾಗಿ ನಿಂತಿದ್ದ ಹೆಲಕಾಪ್ಟರ್ ಇದು ಎಂದು ತಿಳಿಸಿದ್ದಾರೆ. 

ಈ ವೇಳೆ ಏರ್ ಆ್ಯಂಬುಲೆನ್ಸ್'ಗೆ ಮೊದಲು ಹಾರಾಟಕ್ಕೆ ಅವಕಾಶ ಕೊಟ್ಟು, ಮತ್ತೆ ಹೆಲಿಕಾಪ್ಟರ್ ಬರುವವರೆಗೂ 30 ನಿಮಿಷಗಳ ಕಾಲ ಕಾದು ನಂತರ ಹೆಲಿಕಾಪ್ಟರ್ ಮೂಲಕ ರಾಹುಲ್ ಪ್ರಯಾಣ ಬೆಳೆಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT