ಎಮ್ಮೆ ಕಳ್ಳತನದ ಶಂಕೆ: 20 ವರ್ಷದ ಯುವಕನ ಮೇಲೆ ಸಾಮೂಹಿಕ ಹಲ್ಲೆ! 
ದೇಶ

ಎಮ್ಮೆ ಕಳ್ಳತನದ ಶಂಕೆ: 20 ವರ್ಷದ ಯುವಕನ ಮೇಲೆ ಸಾಮೂಹಿಕ ಹಲ್ಲೆ; ಹತ್ಯೆ

ದುಬೈ ನಿಂದ ಮನೆಗೆ ಬಂದಿದ್ದ 20 ವರ್ಷದ ಯುವಕನನ್ನು ಗ್ರಾಮಸ್ಥರು ಹಿಡಿದು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

ಬರೇಲಿ: ದುಬೈ ನಿಂದ ಮನೆಗೆ ಬಂದಿದ್ದ 20 ವರ್ಷದ ಯುವಕನನ್ನು ಗ್ರಾಮಸ್ಥರು ಹಿಡಿದು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.
ಶಾರೂಖ್, 20 ಹಲ್ಲೆಗೊಳಗಿ ಮೃತಪಟ್ಟ ವ್ಯಕ್ತಿಯಾಗಿದ್ದು, ಪ್ರಕರಣದ ಸಂಬಂಧ ನಾಲ್ವರನ್ನು ಕಂಟೋನ್ಮೆಂಟ್ ಪೊಲೀಸರು ಬಂಧಿಸಿದ್ದಾರೆ. ಶಾರೂಖ್ ಜೊತೆಗೆ 3 ಯುವಕರು ಆ.29 ರಂದು ರಾತ್ರಿ ಅಡ್ಡಾಡಲು ಹೋಗಿದ್ದರು. ಇವರು ಎಮ್ಮೆ ಕದ್ದಿದ್ದಾರೆ ಎಂದು ಭಾವಿಸಿದ ಗ್ರಾಮಸ್ಥರು ಶಾರೂಖ್ ನನ್ನು ಹಿಡಿದು ಥಳಿಸಿದ್ದಾರೆ.  ಆದರೆ ಆತನ ಸಹಚರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕುಳಿಯಲಿಲ್ಲ, ದುಬೈ ನಲ್ಲಿ ಟೈಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಾರೂಖ್ ಇತ್ತೀಚೆಗಷ್ಟೇ ಮನೆಗೆ ವಾಪಸ್ಸಾಗಿದ್ದ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT