ಸಂಗ್ರಹ ಚಿತ್ರ 
ದೇಶ

ಬ್ರಹ್ಮಪುತ್ರಾ ನದಿ ಪ್ರವಾಹ: ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದ ಚೀನಾ

ಟಿಬೆಟ್ ಮತ್ತು ಚೀನಾದಲ್ಲಿ ಸುರಿಯುತ್ತಿರುವ ಭಾರಿ ಮಳೆ ಇದೀಗ ಭಾರತದಲ್ಲಿ ಪ್ರವಾಹ ಭೀತಿಗೆ ಕಾರಣವಾಗಿದ್ದು, ಬ್ರಹ್ಮಪುತ್ರಾ ನದಿಗೆ ಚೀನಾ ಅಪಾರ ಪ್ರಮಾಣದ ನೀರು ಹರಿಸುವ ಕುರಿತು ಮುನ್ನೆಚ್ಚರಿಕೆ ನೀಡಿದೆ.

ಇಟಾನಗರ: ಟಿಬೆಟ್ ಮತ್ತು ಚೀನಾದಲ್ಲಿ ಸುರಿಯುತ್ತಿರುವ ಭಾರಿ ಮಳೆ ಇದೀಗ ಭಾರತದಲ್ಲಿ ಪ್ರವಾಹ ಭೀತಿಗೆ ಕಾರಣವಾಗಿದ್ದು, ಬ್ರಹ್ಮಪುತ್ರಾ ನದಿಗೆ ಚೀನಾ ಅಪಾರ ಪ್ರಮಾಣದ ನೀರು ಹರಿಸುವ ಕುರಿತು ಮುನ್ನೆಚ್ಚರಿಕೆ ನೀಡಿದೆ.
ಬ್ರಹ್ಮಪುತ್ರಾ ನದಿಯಲ್ಲಿ ಪ್ರವಾಹದ ಮಟ್ಟ ಏರಿಕೆಯಾಗಲಿದೆ ಎಂದು ಚೀನಾ ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದ್ದು, ಇದರಿಂದಾಗಿ ನದಿಯ ಕೆಳಭಾಗದಲ್ಲಿರುವ ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ ಎಂದು ಅರುಣಾಚಲ ಪ್ರದೇಶದ ಸಂಸದ ನಿನೋಂಗ್ ಎರಿಂಗ್ ತಿಳಿಸಿದ್ದಾರೆ. 
ಬ್ರಹ್ಮಪುತ್ರಾ ನದಿ ಚೀನಾದ ವಶದಲ್ಲಿರುವ ಟಿಬೆಟ್‌ನಲ್ಲಿ ಹುಟ್ಟಿ, ಅರುಣಾಚಲ ಪ್ರದೇಶದಲ್ಲಿ ಸಿಯಾಂಗ್ ಹೆಸರಿನಲ್ಲಿ ಹರಿಯುತ್ತದೆ. ಅಲ್ಲಿಂದ ಮುಂದೆ ಅಸ್ಸಾಂಗೆ ಸಾಗಿ ಅಲ್ಲಿ ಬ್ರಹ್ಮಪುತ್ರಾ ಎಂದು ಕರೆಸಿಕೊಳ್ಳುತ್ತದೆ. ನಂತರ ಬಾಂಗ್ಲಾದೇಶದ ಮೂಲಕ ಹರಿದು ಬಂಗಾಳ ಕೊಲ್ಲಿಗೆ ಸೇರುತ್ತದೆ. ಚೀನಾದಲ್ಲಿ ಬ್ರಹ್ಮಪುತ್ರಾ ನದಿಯನ್ನು ತ್ಸಾಂಗ್‌ಪೋ ಎಂದು ಕರೆಯಲಾಗುತ್ತಿದ್ದು, ಪ್ರವಾಹದ ಮಟ್ಟ 150 ವರ್ಷಗಳಲ್ಲೇ ಅಧಿಕವಾಗಿದೆ ಎಂದು ಚೀನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. 
'ಬ್ರಹ್ಮಪುತ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಅರುಣಾಚಲ ಪ್ರದೇಶದ ಹಲವೆಡೆ ಪ್ರವಾಹದ ಆತಂಕ ಎದುರಾಗಿದೆ. ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ನಿನೋಂಗ್ ಎರಿಂಗ್ ಸುದ್ದಿಸಂಸ್ಥೆಗೆ ತಿಳಿಸಿದರು. 
ಚೀನಾ ಸರ್ಕಾರದ ವರದಿ ಪ್ರಕಾರ, ಬ್ರಹ್ಮಪುತ್ರಾ ನದಿಯಲ್ಲಿ 9,020 ಕ್ಯೂಮೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದುವರೆಗೆ ನದಿ ಪ್ರಶಾಂತವಾಗಿದ್ದು, ಯಾವುದೇ ಕ್ಷಣ ಪ್ರವಾಹ ಹೆಚ್ಚಬಹುದು. ಮೇ 15ರ ಬಳಿಕ ಚೀನಾ ಬ್ರಹ್ಮಪುತ್ರಾ ಮತ್ತು ಸಟ್ಲೆಜ್ ನದಿಗಳ ನೀರಿನ ಮಟ್ಟದ ಮಾಹಿತಿ ಹಂಚಿಕೊಳ್ಳಲಾರಂಭಿಸಿದೆ. ಪ್ರತಿದಿನ ಎರಡು ಬಾರಿ ಈ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT