ಲಾಲೂ ಪ್ರಸಾದ್ ಯಾದವ್ 
ದೇಶ

ಬಹುಕೋಟಿ ಮೇವು ಹಗರಣ: ರಾಂಚಿ ಕೋರ್ಟ್ ಗೆ ಲಾಲೂ ಶರಣು; ಜೈಲಿನಲ್ಲೆ ಚಿಕಿತ್ಸೆಗೆ ಜಡ್ಜ್ ಸೂಚನೆ

ಬಹುಕೋಟಿ ಮೇವು ಹಗರಣದಲ್ಲಿ ಅಪರಾಧಿಯಾಗಿ ಜೈಲುವಾಸ ಅನುಭವಿಸುತ್ತಿರುವ ಆರ್ ಜೆ ಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ತಾತ್ಕಾಲಿಕ ...

ರಾಂಚಿ: ಬಹುಕೋಟಿ ಮೇವು ಹಗರಣದಲ್ಲಿ ಅಪರಾಧಿಯಾಗಿ ಜೈಲುವಾಸ ಅನುಭವಿಸುತ್ತಿರುವ ಆರ್ ಜೆ ಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ತಾತ್ಕಾಲಿಕ ಜಾಮೀನು ಅವಧಿ ಅಂತ್ಯಗೊಂಡಿದ್ದು, ಇಂದು ಸಿಬಿಐ ವಿಶೇಷ ಕೋರ್ಟ್ ಗೆ ಶರಣಾಗಿದ್ದಾರೆ. 
ಆಗಸ್ಟ್ 30ರೊಳಗೆ ಕೋರ್ಟ್ ಗೆ ಶರಣಾಗಬೇಕು ಎಂದು ನ್ಯಾಯಾಲಯ ಸೂಚಿಸಿದ್ದ ಹಿನ್ನೆಲೆಯಲ್ಲಿ, ಲಾಲೂ ನಿನ್ನೆ ಪಾಟ್ನಾದಿಂದ ರಾಂಚಿಗೆ ಆಗಮಿಸಿದ್ದರು. 
ಲಾಲೂ ಪ್ರಸಾದ್ ಹಲವು ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಲಾಲು ಪರ ವಕೀಲ ಪ್ರಬಾತ್ ಕುಮಾರ್ ನ್ಯಾಯಾಧೀಶರಿಗೆ ತಿಳಿಸಿದರು, ಹೀಗಾಗಿ ಲಾಲೂ ಪ್ರಸಾದ್ ಅವರಿಗೆ ಬಿಸ್ರಾ ಮುಂಡಾ ಜೈಲಿನಲ್ಲೇ ಚಿಕಿತ್ಸೆಗೆ ಅವಕಾಶ ಮಾಡುವಂತೆ ನ್ಯಾಯಾದೀಶ ಎಸ್.ಎಸ್ ಪ್ರಸಾದ್ ಸೂಚಿಸಿದ್ದಾರೆ.
ರಾಂಚಿಯ ರಾಜೇಂದ್ರ ಮೆಡಿಕಲ್ ಸೈನ್ಸ್ ಕಾಲೇಜಿನ  ವೈದ್ಯ ಉಮೇಶ್ ಅವರ ಬಳಿ ಚಿಕಿತ್ಸೆ ಪಡೆಯುವಂತೆ ಕೋರ್ಟ್ ನಿರ್ದೇಶನ ನೀಡಿದೆ. 
ಬಹುಕೋಟಿ ಮೇವು ಹಗರಣದಲ್ಲಿ ಲಾಲು ಪ್ರಸಾದ್ ತಪ್ಪಿತಸ್ಥ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಕಳೆದ ವರ್ಷದ ಡಿಸೆಂಬರ್ ನಿಂದ ಲಾಲೂ ಜೈಲು ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT