ಸಾಂದರ್ಭಿಕ ಚಿತ್ರ 
ದೇಶ

ಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ

ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ ಕಾನೂನು ಆಯೋಗ, ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.

ನವದೆಹಲಿ:ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ  ಕಾನೂನು ಆಯೋಗ,  ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.

ಜಮ್ಮು ಮತ್ತು ಕಾಶ್ಮೀರ ಹೊರತುಪಡಿಸಿ ಉಳಿದ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವಂತೆ ಶಿಫಾರಸು ಮಾಡಿರುವ ಆಯೋಗ ಕರಡು ವರದಿಯನ್ನು ಕಾನೂನು ಸಚಿವಾಲಯಕ್ಕೆ ಸಲ್ಲಿಸಿದೆ.

ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ಸಾರ್ವಜನಿಕರ ಹಣ ಉಳಿತಾಯವಾಗುತ್ತದೆ. ಭದ್ರತಾ  ಪಡೆ ಹಾಗೂ ಆಡಳಿತಾತ್ಮಕ ವ್ಯವಸ್ಥೆಯಲ್ಲಿನ ಹೊರೆಯನ್ನು ಕಡಿಮೆ ಮಾಡಲು ನೆರವಾಗುತ್ತದೆ.  ಸರ್ಕಾರದ ನೀತಿಗಳನ್ನು ಉತ್ತಮವಾಗಿ ಅನುಷ್ಠಾನಗಳಿಸಬಹುದಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ದೇಶದಲ್ಲಿನ ಆಡಳಿತಾತ್ಮಕ ಯಂತ್ರ ಚುನಾವಣೆ ಬದಲಿಗೆ ನಿರಂತರವಾಗಿ ಅಭಿವೃದ್ದಿ ಪರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತದೆ. ಆದಾಗ್ಯೂ, ಅಸ್ತಿತ್ವದಲ್ಲಿರುವ ಸಂವಿಧಾನದ ಚೌಕಟ್ಟಿನೊಳಗೆ  ಏಕಕಾಲಿಕ ಚುನಾವಣೆ ನಡೆಸುವುದು ಕಷ್ಟಸಾಧ್ಯ ಎಂದು ಕಾನೂನು ಆಯೋಗ ತನ್ನ ಕರಡು ವರದಿಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT