ರಾಷ್ಟ್ರವನ್ನು ಖಂಡಿಸುವುದು, ಟೀಕಿಸುವುದು ದೇಶ ವಿರೋಧಿಯಾಗುವುದಿಲ್ಲ: ಕಾನೂನು ಆಯೋಗ 
ದೇಶ

ರಾಷ್ಟ್ರವನ್ನು ಖಂಡಿಸುವುದು, ಟೀಕಿಸುವುದು ದೇಶ ವಿರೋಧಿಯಾಗುವುದಿಲ್ಲ: ಕಾನೂನು ಆಯೋಗ

ರಾಷ್ಟ್ರವನ್ನು ಖಂಡಿಸುವುದು ದೇಶದ್ರೋಹವಲ್ಲ, ಸರ್ಕಾರದ ನೀತಿ ನಿಯಮಗಳನ್ನು ಒಪ್ಪದೇ ದೇಶದ ಬಹುಮತದೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಅವಕಾಶವಿದೆ ಎಂದು ಕಾನೂನು ಆಯೋಗ ಹೇಳಿದೆ.

ರಾಷ್ಟ್ರವನ್ನು ಖಂಡಿಸುವುದು ದೇಶದ್ರೋಹವಲ್ಲ, ಸರ್ಕಾರದ ನೀತಿ ನಿಯಮಗಳನ್ನು ಒಪ್ಪದೇ ದೇಶದ ಬಹುಮತದೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಅವಕಾಶವಿದೆ ಎಂದು ಕಾನೂನು ಆಯೋಗ ಹೇಳಿದೆ. 
ಅಕ್ರಮವಾಗಿ ಅಥವಾ ಹಿಂಸಾಚಾರದ ಮೂಲಕ ಯಾವುದೇ ಸರ್ಕಾರವನ್ನು ಉರುಳಿಸುವ ಕೃತ್ಯಗಳಿಗೆ ದೇಶದ್ರೋಹದ ಕಾನೂನನ್ನು ಅನ್ವಯ ಮಾಡಬಹುದಾಗಿದೆ ಎಂದು ಕಾನೂನು ಆಯೋಗ ಹೇಳಿದೆ. ಅಷ್ಟೇ ಅಲ್ಲದೇ ರಾಷ್ಟ್ರವಿರೋಧಿ ಕಾನೂನನ್ನು ಅನ್ವಯಿಸುವ ಐಪಿಸಿ ಸೆಕ್ಷನ್ 12 ಎ ನ್ನು ಮರುಪರಿಶೀಲನೆ ಮಾಡಬೇಕೆಂದು ಕಾನೂನು ಆಯೋಗ ಸಲಹೆ ನೀಡಿದೆ.
ಸಂವಿಧಾನದಲ್ಲಿ ನೀಡಲಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವುದರಿಂದ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಭಾರತದಂತಹ ದೇಶದಲ್ಲಿ ದೇಶದ್ರೋಹ, ದೇಶವಿರೋಧಿ ಕಾನೂನಿನ ಪರಿಧಿಯನ್ನು ಮರುವ್ಯಾಖ್ಯಾನ ಮಾಡುವ ಅಗತ್ಯವಿದೆ ಎಂದು ಕಾನೂನು ಆಯೋಗ ಅಭಿಪ್ರಾಯಪಟ್ಟಿದೆ.   

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT