ಪರಮ್ ಬಿರ್ ಸಿಂಗ್ 
ದೇಶ

ಹೋರಾಟಗಾರರ ಪತ್ರ 'ರಾಜೀವ್ ಗಾಂಧಿ-ತರಹದ' ಘಟನೆ ಬಗ್ಗೆ ಮಾತನಾಡಿದೆ: ಪುಣೆ ಪೊಲೀಸರು

ಬಂಧಿತ ಐವರು ಹೋರಾಟಗಾರರು ನಿಷೇಧಿದ ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಬಗ್ಗೆ....

ಮುಂಬೈ: ಬಂಧಿತ ಐವರು ಹೋರಾಟಗಾರರು ನಿಷೇಧಿದ ನಕ್ಸಲ್ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಬಗ್ಗೆ ಸ್ಪಷ್ಟ ಪುರಾವೆ ಸಿಕ್ಕ ನಂತರವೇ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಶುಕ್ರವಾರ ಮಹಾರಾಷ್ಟ್ರ ಪೊಲೀಸರು ಹೇಳಿದ್ದಾರೆ.
ನಕ್ಸಲರೊಂದಿಗೆ ಅವರು ನಂಟು ಹೊಂದಿರುವುದು ಸ್ಪಷ್ಟವಾದ ನಂತರವೇ ನಾವು ವಿವಿಧ ನಗರಗಳಲ್ಲಿ ದಾಳಿ ನಡೆಸಿ ಕ್ರಮ ತೆಗೆದುಕೊಂಡಿದ್ದೇವ ಎಂದು ಮಹಾರಾಷ್ಟ್ರ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪರಮ್ ಬಿರ್ ಸಿಂಗ್ ಅವರು ತಿಳಿಸಿದ್ದಾರೆ.
ಹೋರಾಟಗಾರರ ಪತ್ರವೊಂದು ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಮತ್ತೊಂದು ಹತ್ಯೆ ನಡೆಸುವ ಕುರಿತು ಮಾತನಾಡಿದೆ ಎಂದು ಪರಮ್ ಬಿರ್ ಸಿಂಗ್ ಅವರು ಹೇಳಿದ್ದಾರೆ.

ರೋನಾ ವಿಲ್ಸನ್ ಮತ್ತು ಸಿಪಿಐ-ಮಾವೋ ನಾಯಕನ ನಡುವಿನ ಇ-ಮೇಲ್ ಪತ್ರದಲ್ಲಿ ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ 'ಮೋದಿ ರಾಜ್' ಅಂತ್ಯಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪತ್ರದಲ್ಲಿ ಗ್ರೆನೇಡ್ ಲಾಂಚರ್ ಖರೀದಿಗಾಗಿ ಹಣವನ್ನು ಕೇಳಲಾಗಿದೆ. ನಕ್ಸಲರು ಮತ್ತು ಹೋರಾಟಗಾರರ ನಡುವಿನ ಹಲವು ಪತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.
ದೇಶಾದ್ಯಂತ ಮಾನವ ಹಕ್ಕು ಹೋರಾಟಗಾರರ ಬಂಧನವನ್ನು ಪ್ರತಿಪಕ್ಷಗಳು ಹಾಗೂ ಹೋರಾಟಗಾರರ ಸಹೋದ್ಯೋಗಿಗಳು ತೀವ್ರವಾಗಿ ಖಂಡಿಸಿದ್ದರು. ಆದರೆ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಮಹಾ ಪೊಲೀಸರು, ನಕ್ಸಲರು ದೊಡ್ಡ ಸಂಚು ರೂಪಿಸಿದ್ದು, ಅದಕ್ಕೆ ಬಂಧಿತ ಹೋರಾಟಗಾರರು ಸಹಾಯ ಮಾಡುತ್ತಿರುವುದು ನಮ್ಮ ತನಿಖೆಯಿಂದ ಬಹಿರಂಗವಾಗಿದೆ ಎಂದು ಹೇಳಿದ್ದಾರೆ.
ಕಳೆದ ಮಂಗಳವಾರ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ 10 ಹೋರಾಟಗಾರರ ಮನೆ ಮೇಲೆ ದಾಳಿ ನಡೆಸಿದ್ದ ಪುಣೆ ಪೊಲೀಸರು, ಕ್ರಾಂತಿಕಾರಿ ಬರಹಗಾರ ವರವರ ರಾವ್ ಸೇರಿದಂತೆ ಐವರು ಹೋರಾಟಗಾರರನ್ನು ಬಂಧಿಸಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಅವರನ್ನು ಗೃಹ ಬಂಧನದಲ್ಲಿರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT