ಜಿ.ಸುಧಾಕರನ್ 
ದೇಶ

ಶಬರಿಮಲೆಯಲ್ಲಿ ತಂತ್ರಿಗಳಿಗಿಂತ ಕತ್ತೆಗಳೇ ವಾಸಿ: ಕೇರಳ ಸಚಿವ

ಶಬರಿಮಲೆ ದೇವಾಲಯದ ತಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಲೋಕೋಪಯೋಗಿ ಸಚಿವ ಹಾಗೂ ಸಿಪಿಐಎಂ...

ತಿರುವನಂತಪುರ: ಶಬರಿಮಲೆ ದೇವಾಲಯದ ತಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಲೋಕೋಪಯೋಗಿ ಸಚಿವ ಹಾಗೂ ಸಿಪಿಐಎಂ ಮುಖ್ಯಸ್ಥ ಜಿ.ಸುಧಾಕರನ್ ಅವರು, ಶಬರಿಮಲೆಯಲ್ಲಿ ತಂತ್ರಿಗಳಿಗಿಂತ ಅಲ್ಲಿನ ಕತ್ತೆಗಳೇ ಹೆಚ್ಚಾಗಿ ಸೇವೆ ಸಲ್ಲಿಸುತ್ತವೆ. ಹೀಗಾಗಿ ಅವುಗಳ ಮೇಲೆ ದೇವರ ಅನುಗ್ರಹ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಕಟುವಾಗಿ ಮಾತನಾಡುವದಕ್ಕೇ ಹೆಸರಾಗಿರುವ ಸುಧಾಕರನ್​ ಅವರು ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಈ ಹೇಳಿಕೆ ನೀಡಿದ್ದು, ಶಬರಿಮಲೆಯ ತಂತ್ರಿ(ಮುಖ್ಯಪುರೋಹಿತ)ಗಳಿಗೆ ಅಯ್ಯಪ್ಪ ದೇವರ ಮೇಲೆ ಭಕ್ತಿ ಇಲ್ಲ ಮತ್ತು  ದೇವಾಲಯದ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದ್ದಾರೆ.
ತಂತ್ರಿಗಳಿಗಿಂದತ ಕತ್ತೆಗಳೇ ಎಷ್ಟೋ ವಾಸಿ. ದೇವಾಲಯದ ಬಳಿ ಇರುವ ಕತ್ತೆಗಳು ದೇವರಿಗೆ ಸೇವೆ ಸಲ್ಲಿಸುತ್ತವೆ. ಪಂಪಾ ಬಳಿಯಿಂದ ಗುಡ್ಡದ ಮೇಲಿನ ಅಯ್ಯಪ್ಪ ದೇಗುಲಕ್ಕೆ ಭಾರ ಕೊಂಡೊಯ್ಯುವ ಈ ಪ್ರಾಣಿಗಳು ಇದುವರೆಗೆ ಯಾವ ಪ್ರತಿಭಟನೆಯಲ್ಲೂ ಪಾಲ್ಗೊಂಡಿಲ್ಲ. ಕೆಲಸವಾದ ಬಳಿಕ ಪಂಪಾ ನದಿ ಬಳಿ ವಿಶ್ರಾಂತಿ ಪಡೆಯುತ್ತವೆ. ಇವರ ಎದುರು ತಂತ್ರಿಗಳ ಕೆಲಸ, ಸೇವೆ ಏನೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಈ ಹಿಂದೆ ಶಬರಿಮಲೆಗೆ ಎಲ್ಲ ಮಹಿಳೆಯರಿಗೂ ಅವಕಾಶ ನೀಡಿದ ಸುಪ್ರೀಂಕೋರ್ಟ್​ ತೀರ್ಪನ್ನು ವಿರೋಧಿಸಿದ್ದ ತಂತ್ರಿ ಮನೆತನ ದೇವಾಲಯದ ಬಾಗಿಲು ಮುಚ್ಚುತ್ತೇವೆ ಎಂದು ಬೆದರಿಕೆ ಒಡ್ಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

Siddaramaiah Resign: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!

SCROLL FOR NEXT