ನವಜೋತ್ ಸಿಂಗ್ ಸಿಧು 
ದೇಶ

ಪಂಜಾಬ್ ರಾಜ್ಯದ ಕ್ಯಾಪ್ಟನ್ ನಮ್ಮ ಕ್ಯಾಪ್ಟನ್; ಸಿಎಂ ಬಳಿ ಕ್ಷಮೆಯಾಚಿಸಿ- ಸಿಧುಗೆ ಕಾಂಗ್ರೆಸ್ ಸಂಸದ

ಪಂಜಾಬ್ ರಾಜ್ಯದ ಕ್ಯಾಪ್ಟನ್ ನಮ್ಮ ಕ್ಯಾಪ್ಟನ್. ಅಸಂಬದ್ಧ ಹೇಳಿಕೆ ನೀಡಿದ್ದ ಸಚಿವ ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಬಳಿ ಕೂಡಲೇ ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್ ಸಂಸದ ರವ್ನೀತ್...

ಲುಧಿಯಾನ: ಪಂಜಾಬ್ ರಾಜ್ಯದ ಕ್ಯಾಪ್ಟನ್ ನಮ್ಮ ಕ್ಯಾಪ್ಟನ್. ಅಸಂಬದ್ಧ ಹೇಳಿಕೆ ನೀಡಿದ್ದ ಸಚಿವ ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಬಳಿ ಕೂಡಲೇ ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್ ಸಂಸದ ರವ್ನೀತ್ ಸಿಂಗ್ ಬಿಟ್ಟು ಅವರು ಆಗ್ರಹಿಸಿದ್ದಾರೆ. 
ಲುಧಿಯಾನದಲ್ಲಿರುವ ಪ್ರತೀಯೊಂದು ಬೀದಿಯಲ್ಲಿರುವ ಪೋಸ್ಟರ್ ಗಳಲ್ಲಿ ಪಂಜಾಬ್ ಕ್ಯಾಪ್ಟನ್ ನಮ್ಮ ಕ್ಯಾಪ್ಟನ್ ಎಂದು ರಾರಾಜಿಸುತ್ತಿವೆ. ಇದು ಜನರ ನಂಬಿಕೆ ಹಾಗೂ ಭಾವನೆಗಳಿಗೆ ಸಂಬಂಧಿಸಿದ್ದು. ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿಗಳನ್ನು ತಮ್ಮ ತಂದೆಯೆಂದು ಪರಿಗಣಿಸುವುದೇ ಆದರೆ, ತಮ್ಮ ಹೇಳಿಕೆ ಕುರಿತಂತೆ ಕೂಡಲೇ ಕ್ಷಮೆಯಾಚಿಸಬೇಕೆಂದು ಹೇಳಿದ್ದಾರೆ. 
ಮುಖ್ಯಮಂತ್ರಿಗಳ ವಿರೋಧವಿದ್ದರೂ ಪಾಕಿಸ್ತಾನಕ್ಕೆ ಹೋಗಿದ್ದಕ್ಕೆ ಕಾರಣ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದ ನವಜೋತ್ ಸಿಧು ಅವರು, ಅಮರೀಂದರ್ ಸಿಂಗ್ ವಿರುದ್ಧ ಕಿಡಿಕಾರಿದ್ದರು. 
ಹೈದರಾಬಾದ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಿಧು, ನನ್ನ ಕ್ಯಾಪ್ಟನ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ. ರಾಹುಲ್ ಅವರೇ ನನ್ನನ್ನು ಪಾಕಿಸ್ತಾನಕ್ಕೆ ತೆರಳಲು ಆದೇಶಿಸಿದ್ದರು. ರಾಹುಲ್ ಗಾಂಧಿಯವರು ಪಂಜಾಬ್ ಮುಖ್ಯಮಂತ್ರಿಗಳೂ ಕ್ಯಾಪ್ಟೆನ್ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT