ಸುಬೋಧ್​ ಕುಮಾರ್ 
ದೇಶ

ಉತ್ತರ ಪ್ರದೇಶ: ಗೋಹತ್ಯೆ ವದಂತಿಗೆ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಬಲಿ

ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಸೋಮವಾರ ಗೋಹತ್ಯೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು,....

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಸೋಮವಾರ ಗೋಹತ್ಯೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಗಲಭೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಹಾಗೂ ಓರ್ವ ಯುವಕ ಮೃತಪಟ್ಟಿದ್ದಾರೆ.
ಇಂದು ಬುಲಂದ್ ಶಹರ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾವ್ ಗ್ರಾಮದಲ್ಲಿ ಗೋಹತ್ಯೆ ನಡೆದಿದೆ ಎಂದು ಆರೋಪಿಸಿ ಸ್ಥಳೀಯರ ಗುಂಪೊಂದು ಪ್ರತಿಭಟನೆ ನಡೆಸುತ್ತಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸ್‌ ಠಾಣೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಲಭೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮೀರತ್ ವಲಯ ಎಡಿಜಿಪಿ ಪ್ರಶಾಂತ್ ಕುಮಾರ್ ಅವರು ಹೇಳಿದ್ದಾರೆ.
ಗಲಭೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್​ ಕುಮಾರ್​ ಸಿಂಗ್ ಹಾಗೂ 20 ವರ್ಷದ ಯುವಕ ಸುಮಿತ್​ ಎಂಬುವವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುತ್ತಮುತ್ತಲ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮೀರತ್‌ ಎಡಿಜಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಭದ್ರತೆಗಾಗಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಔರಂಗಾಬಾದ್‌-ಜಹಂಗಿರಾಬಾದ್‌ ನಡುವಿನ ಮಾರ್ಗದಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಹಾಪುರದಲ್ಲಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!