ಅಧಿಕಾರಿ ಸುಭೋದ್ ಕುಮಾರ್ ಸಿಂಗ್ 
ದೇಶ

ಬಜರಂಗದಳ ಕಾರ್ಯಕರ್ತರು ಗುಂಡು ಹಾರಿಸಿಲ್ಲ, ಪೊಲೀಸ್ ಗುಂಡೇಟಿನಿಂದ ಅಧಿಕಾರಿ ಸಾವು: ಬಿಜೆಪಿ ಶಾಸಕ

ಬುಲಂದ್ ಶಹರ ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮೃತಪಟ್ಟಿದ್ದಾರೆ...

ಲಖನೌ: ಬುಲಂದ್ ಶಹರ ಹಿಂಸಾಚಾರದ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮೃತಪಟ್ಟಿದ್ದಾರೆ. ಇದರಲ್ಲಿ ಬಜರಂಗ ದಳದ ಕಾರ್ಯಕರ್ತರ ಪಾತ್ರ ಇಲ್ಲ ಎಂದು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.
ಘಟನೆ ನಡೆದಿರುವುದು ದುರದೃಷ್ಟಕರ ಎಂದಿರುವ ರೋಹನಿಯಾ ಶಾಸಕ ಸುರೇಂದ್ರ ಸಿಂಗ್ ಅವರು, ಪೊಲೀಸರು ಸಹ ಉದ್ದೇಶಪೂರ್ವಕವಾಗಿ ಅಧಿಕಾರಿಯನ್ನು ಹತ್ಯೆ ಮಾಡಿಲ್ಲ ಎಂದಿದ್ದಾರೆ.
ಪೊಲೀಸರ ಗುಂಡೇಟಿನಿಂದ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರು ಮೃತಪಟ್ಟಿರುವ ಶಂಕೆ ಇದೆ. ಬಜರಂಗ ದಳದ ಕಾರ್ಯಕರ್ತರು ಕೇವಲ ಇಟ್ಟಿಗೆ ಎಸೆದಿದ್ದಾರೆ. ಆದರೆ ಅವರು ಗುಂಡು ಹಾರಿಸಿಲ್ಲ ಎಂದು ಬಿಜೆಪಿ ಶಾಸಕರು ತಿಳಿಸಿದ್ದಾರೆ.
ಈ ಮಧ್ಯೆ, ಪೊಲೀಸರು ಬಜರಂಗದಳ ಬುಲಂದ್ ಶಹರ ಜಿಲ್ಲಾ ಸಂಚಾಲಕ ಯೋಗೇಶ್ ರಾಜ್ ಈ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಿದ್ದು, ಆತನಕ್ಕೆ ಬಲೆ ಬೀಸಿದ್ದಾರೆ.
ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಸೋಮವಾರ ನಡೆಯುತ್ತಿದ್ದ ಪ್ರತಿಭಟನೆಯೇ ಹಿಂಸಾಚಾರಕ್ಕೆ ತಿರುಗಿತ್ತು. ಈ ಸಂದರ್ಭದಲ್ಲಿ ಹಿಂದು ಮತ್ತು ಮುಸ್ಲಿಂ ಸಮುದಾಯದ ನಡುವೆ ಆರಂಭವಾದ ಕೋಮು ಸಂಘರ್ಷವನ್ನು ತಡೆಯಲು ಮುಂದಾದ ಸುಬೋಧ್ ಕುಮಾರ್ ಸಿಂಗ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT