ಯೋಗಿ ಆದಿತ್ಯನಾಥ್ 
ದೇಶ

ರಾಮಮಂದಿರ ನಿರ್ಮಾಣಕ್ಕೆ ಬೆದರಿಕೆಯೊಡಿದ್ದರೆ ಮಸೂದ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ್ - ಯೋಗಿ ಆದಿತ್ಯನಾಥ್

ರಾಮ ಮಂದಿರ ನಿರ್ಮಾಣಕ್ಕೆ ಬೆದರಿಕೆಯೊಡಿದ್ದರೆ ಜೈಸ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝಾರ್ ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ ನಡೆಸಬೇಕಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.

ವಿಜಯ್ ನಗರ:  ರಾಮ ಮಂದಿರ ನಿರ್ಮಾಣಕ್ಕೆ ಬೆದರಿಕೆಯೊಡಿದ್ದರೆ  ಜೈಸ್ ಇ ಮೊಹಮ್ಮದ್  ಮುಖ್ಯಸ್ಥ ಮಸೂದ್ ಅಝಾರ್  ಮೇಲೆ ಮುಂದಿನ ಸರ್ಜಿಕಲ್ ಸ್ಟ್ರೈಕ ನಡೆಸಬೇಕಾಗುತ್ತದೆ ಎಂದು  ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.

ರಾಜಸ್ತಾನ ವಿಧಾನಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ ಆದಿತ್ಯನಾಥ್,  ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿರುವುದಾಗಿ ತಿಳಿಸಿದರು.

ಒಂದು ವೇಳೆ ರಾಮಮಂದಿರ ನಿರ್ಮಾಣಕ್ಕೆ ಮಸೂದ್ ಅಝಾರ್ ಬೆದರಿಕೆಯೊಡಿದ್ದರೆ ಆತನ ಮೇಲೆಯೇ ಮುಂದಿನ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗುವುದು, ಅಲ್ಲದೇ, ಆತನ  ಗುರುವನ್ನು ಉಳಿಸುವುದಿಲ್ಲ ಎಂದು ಹೇಳಿದರು.

ಮೊಘಲ್ ಸಾಮ್ರಾಟ ಬಾಬರ್  ಕ್ರಿ. ಶ. 1578 ರಲ್ಲಿ ಆಯೋಧ್ಯೆಯಲ್ಲಿ ನಿರ್ಮಿಸಿದ್ದ ಬಾಬ್ರಿ ಮಸೀದಿಯನ್ನು ಡಿಸೆಂಬರ್ 6, 1192ರಲ್ಲಿ ಹಿಂದೂಪರ ಕಾರ್ಯಕರ್ತರಿಂದ ಧ್ವಂಸಗೊಳಿಸಲಾಯಿತು.
ರಾಮಮಂದಿರವನ್ನು ಧ್ವಂಸಗೊಳಿಸಿ ಬಾಬ್ರಿ ಮಸೀದಿ ಕಟ್ಟಿರುವುದರಿಂದ ಅದನ್ನು ಧ್ವಂಸಗೊಳಿಸಿರುವುದಾಗಿ  ಹಿಂದೂ ಪರ ಕಾರ್ಯಕರ್ತರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ವಿವಾದ ಸುಪ್ರೀಂಕೋರ್ಟ್ ನಲ್ಲಿ ಹಲವು ವರ್ಷಗಳಿಂದಲೂ ವಿಚಾರಣೆ ನಡೆಯುತ್ತಿದ್ದರೂ ಇನ್ನೂ ಕೂಡಾ ಅಂತಿಮ ತೀರ್ಪು ಹೊರಬಿದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT