ಬುಲಂದಶಹರ್ ಪೊಲೀಸ್ ಅಧಿಕಾರಿ 
ದೇಶ

ತಲೆಗೆ ಬಿದ್ದ ಗುಂಡೇಟಿನಿಂದ ಬುಲಂದಶಹರ್ ಪೊಲೀಸ್ ಅಧಿಕಾರಿ ಸಾವು: ಮರಣೋತ್ತರ ಪರೀಕ್ಷೆ ವರದಿ

ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ ಪೊಲೀಸ್ ಅಧಿಕಾರಿಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದ್ದು....

ಬುಲಂದಶಹರ್: ಉತ್ತರಪ್ರದೇಶದ ಬುಲಂದಶಹರ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಹತ್ಯೆಯಾದ ಪೊಲೀಸ್ ಅಧಿಕಾರಿಯ ಮರಣೋತ್ತರ ಪರೀಕ್ಷೆ ವರದಿ ಬಹಿರಂಗವಾಗಿದ್ದು, 3.2 ಎಂಎಂ ಬೋರ್ ಬುಲೆಟ್ ನಿಂದ ತಲೆಗೆ ಉಂಟಾದ ಗಾಯದಿಂದಾಗಿ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಹೇಳಿದೆ. 
ಬುಲೆಟ್ ನಿಂದ ತಲೆಗೆ ಉಂಟಾದ ಗಾಯದಿಂದಾಗಿ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೂ ಮುನ್ನ ಮೃತ ಪೊಲೀಸ್ ಅಧಿಕಾರಿಯ ಕುಟುಂಬ ಸದಸ್ಯರು ಪೊಲೀಸ್ ಅಧಿಕಾರಿಯ ವಿರುದ್ಧ ಇಲಾಖೆಯವರೇ ಷಡ್ಯಂತ್ರ ರೂಪಿಸಿದ್ದರು ಎಂದು ಆರೋಪಿಸಿದ್ದರು. 
ಈ ನಡುವೆ ಪೊಲೀಸ್ ಅಧಿಕಾರಿಯ ಸಾವಿಗೆ ಗುಪ್ತಚರ ಮಾಹಿತಿ ವೈಫಲ್ಯವೇ ಕಾರಣವೇ ಎಂಬ ಪ್ರಶ್ನೆಗೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ಈಗಲೇ ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ, ತನಿಖೆ ಪೂರ್ಣಗೊಳ್ಳುವವರೆಗೂ ಇಲಾಖೆಯ ಯಾವ ಅಧಿಕಾರಿಯ ವಿರುದ್ಧವೂ ಕ್ರಮ ಕೈಗೊಳ್ಳುವುದಿಲ್ಲ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಅಡಿಜಿ ಆನಂದ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT