ಮೈಸೂರಿನಲ್ಲಿ ನಡೆದ 19 ರಾಜ್ಯಗಳ ಚುನಾವಣಾ ಆಯುಕ್ತರ ರಾಷ್ಟ್ರೀಯ ಸಮ್ಮೇಳನ 
ದೇಶ

ನಮಗೆ ಮೈಸೂರಿನ ಅಳಿಸಲಾಗದ ಶಾಯಿಯೇ ಬೇಕು: ಮಧ್ಯಪ್ರದೇಶದ ಚುನಾವಣಾ ಆಯುಕ್ತ

ಮೈಸೂರಿನಲ್ಲಿ ತಯಾರಾಗುವ ಅಳಿಸಲಾಗದ ಶಾಯಿ ಉತ್ತಮ ಗುಣಮಟ್ಟದ್ದಾಗಿದ್ದು, ಇದೇ ಶಾಯಿಯನ್ನು ಚುನಾವಣೆಯಲ್ಲಿ ಬಳಸಲಾಗುತ್ತದೆ ಎಂದು ಮಧ್ಯ ಪ್ರದೇಶ ಚುನಾವಣಾ ಆಯುಕ್ತ ಪರಶುರಾಮ್ ಹೇಳಿದ್ದಾರೆ.

ಮೈಸೂರು: ಮೈಸೂರಿನಲ್ಲಿ ತಯಾರಾಗುವ ಅಳಿಸಲಾಗದ ಶಾಯಿ ಉತ್ತಮ ಗುಣಮಟ್ಟದ್ದಾಗಿದ್ದು, ಇದೇ ಶಾಯಿಯನ್ನು ಚುನಾವಣೆಯಲ್ಲಿ ಬಳಸಲಾಗುತ್ತದೆ ಎಂದು ಮಧ್ಯ ಪ್ರದೇಶ ಚುನಾವಣಾ ಆಯುಕ್ತ ಪರಶುರಾಮ್ ಹೇಳಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ನಡೆದ 19 ರಾಜ್ಯಗಳ ಚುನಾವಣಾ ಆಯುಕ್ತರ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದ ನಂತರ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಮಧ್ಯ ಪ್ರದೇಶ ಚುನಾವಣಾ ಆಯುಕ್ತ ಪರಶುರಾಮ್ ಅವರು, 'ಚುನಾವಣೆಗಳಲ್ಲಿ ಮತದಾರರ ಬೆರಳಿಗೆ ಹಾಕುವ ಅಳಿಸಲಾಗದ ಶಾಯಿಯನ್ನು ಮೈಸೂರಿನ ಪೇಂಟ್ಸ್ ಮತ್ತು ವಾರ್ನಿಶ್ ಸಂಸ್ಥೆ ಪೂರೈಸುತ್ತಿದೆ. ಸಂಸ್ಥೆಯು ಪೂರೈಸುತ್ತಿರುವ ಅಳಿಸಲಾಗದ ಶಾಯಿ ಬಗ್ಗೆ ನಮಗೆ ಸಂಪೂರ್ಣ ತೃಪ್ತಿ ಇದ್ದು ಇದನ್ನು ಬದಲಿಸುವ ಅಗತ್ಯ ನಮಗಿಲ್ಲ ಎಂದು ಹೇಳಿದರು.
ಅಂತೆಯೇ ಇಡೀ ದೇಶದ ಚುನಾವಣೆಗಳಲ್ಲಿ ಮೈಸೂರಿನಿಂದಲೇ ಅಳಿಸಲಾಗದ ಶಾಯಿ ಪೂರೈಕೆಯಾಗುತ್ತಿರುವುದು ಮೈಸೂರಿಗೂ ಹೆಮ್ಮೆ. ರಾಜ್ಯ ಸರಕಾರದ ಒಡೆತನದಲ್ಲಿರುವ ಈ ಸಂಸ್ಥೆಯಿಂದ ಪೂರೈಕೆಯಾಗುತ್ತಿರುವ ಶಾಯಿ ಬಗ್ಗೆ ನಮಗೆ ಸಂಪೂರ್ಣ ತೃಪ್ತಿ ಇದೆ. ಮಧ್ಯಪ್ರದೇಶ ಚುನಾವಣಾ ಆಯೋಗ ಮೈಸೂರಿನ ಅಳಿಸಲಾಗದ ಶಾಯಿಯನ್ನೇ ಪಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಇಂದು ನಡೆದ ಚುನಾವಣಾ ಆಯುಕ್ತರ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ 19 ರಾಜ್ಯಗಳ ಚುನಾವಣಾ ಆಯುಕ್ತರು ಪಾಲ್ಗೊಂಡಿದ್ದರು. ಈ ವೇಳೆ ಚುನಾವಣೆಯಲ್ಲಿ ತಾಂತ್ರಿಕತೆ ಮತ್ತು ಆನ್ ಲೈನ್ ಮತದಾನ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT