ಬಾಬ್ರಿ ಮಸೀದಿ 
ದೇಶ

ಡಿಸೆಂಬರ್ 6: ಬಾಬ್ರಿ ಮಸೀದಿ ಧ್ವಂಸ, ವಿಹೆಚ್ ಪಿಯಿಂದ 'ಶೌರ್ಯ ದಿವಸ್' ಆಚರಣೆ ಸಾಧ್ಯತೆ?

ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ ಅಂಗವಾಗಿ ಡಿಸೆಂಬರ್ 6ನ್ನು ಶೌರ್ಯ ದಿವಸವನ್ನಾಗಿ ಆಚರಿಸಲು ವಿಶ್ವ ಹಿಂದೂ ಪರಿಷತ್ ಚಿಂತನೆ ನಡೆಸಿದೆ

ನವದೆಹಲಿ: ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿ ಧ್ವಂಸ ವರ್ಷಾಚರಣೆ ಅಂಗವಾಗಿ  ಡಿಸೆಂಬರ್ 6ನ್ನು ಶೌರ್ಯ ದಿವಸವನ್ನಾಗಿ ಆಚರಿಸಲು ವಿಶ್ವ ಹಿಂದೂ ಪರಿಷತ್  ಚಿಂತನೆ ನಡೆಸಿದೆ. ರಾಮಮಂದಿರ ನಿರ್ಮಾಣಕ್ಕೆ ಬೆಂಬಲ ಸೂಚಕವಾಗಿ  ಡಿಸೆಂಬರ್ 18 ರಂದು ಗೀತಾ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

2019 ರ ಲೋಕಸಭಾ ಚುನಾವಣೆ ಹತ್ತಿರವಿರುವಂತೆ ಎಲ್ಲಾರ ಕಣ್ಣು  ರಾಮ ಮಂದಿರ ನಿರ್ಮಾಣದತ್ತ ನೆಟ್ಟಿದೆ.  ದೇವಾಲಯ ನಿರ್ಮಾಣಕ್ಕಾಗಿ ಬಾಬ್ರಿ ಮಸೀದಿ ಧ್ವಂಸಗೊಳಿಸಿದ್ದಕ್ಕೆ 26 ವರ್ಷ ಸಂದಿರುವ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು  ಶೌರ್ಯ ದಿವಸ್ ಆಗಿ ಆಚರಿಸುವ ಸಾಧ್ಯತೆ ಇದೆ.

ಅಯೋಧ್ಯೆಯಲ್ಲಿ ಶೌರ್ಯ ದಿವಸ್ ಕಾರ್ಯಕ್ರಮವಾಗಿ ಸಂಪ್ರದಾಯಿಕವಾಗಿ ಆಚರಿಸಲಾಗುವುದು, ವಿಶ್ವ ಹಿಂದೂ ಪರಿಷತ್ ಮತ್ತಿತರ ಸಂಘಟನೆಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು, ಸರಸ್ವತಿಗೆ ವಿಶೇಷವಾದ ಪೂಜೆ ಸಲ್ಲಿಸಲಾಗುವುದು ಎಂದು  ವಿಹೆಚ್ ಪಿ ವಕ್ತಾರ ಶರದ್ ಶರ್ಮಾ ಹೇಳಿದ್ದಾರೆ.
ದೆಹಲಿಯಲ್ಲಿ ಡಿಸೆಂಬರ್ 9 ರಂದು ಆಯೋಜಿಸಿರುವ ಮತ್ತೊಂದು ಧರ್ಮ ಸಭಾದಲ್ಲಿ ಸುಮಾರು ಐದು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದೂ ಪರಿಷತ್  ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT