ಪ್ರಹ್ಲಾದ್ ಮೋದಿ-ನರೇಂದ್ರ ಮೋದಿ 
ದೇಶ

ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ!

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರ ಸಹೋದರ ಪ್ರಹ್ಲಾದ್ ಮೋದಿಯೇ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದು ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಯೋಜನೆಯೊಂದನ್ನು ಮರುಪರಿಶೀಲನೆ

ಔರಂಗಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರ ಸಹೋದರ ಪ್ರಹ್ಲಾದ್ ಮೋದಿಯೇ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದು ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಯೋಜನೆಯೊಂದನ್ನು ಮರುಪರಿಶೀಲನೆ ಮಾಡಬೇಕೆಂದು ಆಗ್ರಹಿಸಿದ್ದಾರೆ. 
ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಂಬಂಧಪಟ್ಟ ನೇರ ಲಾಭ ವರ್ಗಾವಣೆ  ಯೋಜನೆಯನ್ನು ಮರುಪರಿಶೀಲನೆ ಮಾಡಬೇಕೆಂದು ಪ್ರಹ್ಲಾದ್ ಮೋದಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೇರ ಲಾಭ ವರ್ಗಾವಣೆ ಯೋಜನೆಯಿಂದಾಗಿ ರೇಷನ್ ಶಾಪ್ ಮಾಲಿಕರಿಗೆ ದ್ರೋಹವಾಗಿದೆ ಎಂಬ ಆರೋಪ ಕೇಳಿಬಂದಿದೆ. 
ಇದೇ ವೇಳೆ ತಮ್ಮ ಪ್ರತಿಭಟನೆಯ ವಿಷಯವನ್ನೇ ಲಾಭವಾಗಿ  ಬಳಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧವೂ ಪ್ರಹ್ಲಾದ್ ಮೋದಿ ಹೌಹಾರಿದ್ದು, ನರೇಂದ್ರ ಮೋದಿ ಸರ್ಕಾರ ನೋಟು ನಿಷೇಧ ಜಿಎಸ್ ಟಿ ಜಾರಿಗೆ ತಂದಿದ್ದು ಕೆಲವರಿಗೆ ನೋವು ಉಂಟುಮಾಡಿರಬಹುದು ಆದರೆ ನ್ಯಾಯಯುತವಾಗಿ ಉದ್ಯಮ ಮಾಡುವವರಿಗೆ ಇದರಿಂದ ಯಾವುದೇ ಸಮಸ್ಯೆಯಾಗಿಲ್ಲ ಎಂದಿದ್ದಾರೆ. 
ಅಖಿಲ ಭಾರತೀಯ ನ್ಯಾಯಬೆಲೆ ಅಂಗಡಿ ಡೀಲರ್ಸ್ ಒಕ್ಕೂಟದ ಉಪಾಧ್ಯಕ್ಷರಾಗಿರುವ ಪ್ರಹ್ಲಾದ್ ಮೋದಿ, ಔರಂಗಾಬಾದ್ ಜಿಲ್ಲಾ ನ್ಯಾಯ ಬೆಲೆ ಅಂಗಡಿ ಪೂರೈಕೆದಾರರ ಒಕ್ಕೂಟ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಹ್ಲಾದ್ ಮೋದಿ, ನೇರ ಲಾಭ ವರ್ಗಾವಣೆ ಯೋಜನೆಯನ್ನು ಮರುಪರಿಶೀಲನೆ ಮಾಡಬೇಕೆಂದು ಮಹಾರಾಷ್ಟ್ರ ಸರ್ಕಾರಕ್ಕೂ ಆಗ್ರಹಿಸಿದ್ದು, ಜನತೆ ಹಾಗೂ ಅಂಗಡಿ ಮಾಲಿಕರು ಇಬ್ಬರಿಗೂ ಸಮಸ್ಯೆಯಾಗದಂತೆ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ