ಸಾಂದರ್ಭಿಕ ಚಿತ್ರ 
ದೇಶ

ಹೋಟೆಲ್ ನಲ್ಲಿ ಮಗನ ಎದುರೇ ಪತ್ನಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ವ್ಯಕ್ತಿಯೊಬ್ಬ ತನ್ನ ಮಗನ ಮುಂದೆಯೇ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾರಾಷ್ಟ್ರದ....

ಮುಂಬೈ: ವ್ಯಕ್ತಿಯೊಬ್ಬ ತನ್ನ ಮಗನ ಮುಂದೆಯೇ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಹಾರಾಷ್ಟ್ರದ ಪ್ರಸಿದ್ಧ ಮಹಾಬಲೇಶ್ವರ ಬೆಟ್ಟದಲ್ಲಿ ನಡೆದಿದೆ.
ವೃತ್ತಿಯಲ್ಲಿ ಚಾಲಕನಾಗಿದ್ದ ಅನಿಲ್ ಶಿಂದೆ(34) ಎಂಬ ವ್ಯಕ್ತಿ ಪತ್ನಿ ಹಾಗೂ ತನ್ನ 11 ವರ್ಷದ ಮಗನೊಂದಿಗೆ ಸತಾರ ಜಿಲ್ಲೆಯ ಮಹಾಬಲೇಶ್ವರಕ್ಕೆ ಪ್ರವಾಸಕ್ಕೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹೋಟೆಲ್ ನಲ್ಲಿ ತಂಗಿದ್ದ ದಂಪತಿ ಮಧ್ಯೆ ನಿನ್ನೆ ರಾತ್ರಿ ಜಗಳವಾಗಿದ್ದು, ತಾಳ್ಮೆ ಕಳೆದುಕೊಂಡ ಶಿಂದೆ ಚಾಕುವಿನಿಂದ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಗ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ತಂದೆಯನ್ನು ತಡೆಯಲು ಮಗ ಸಾಕಷ್ಟು ಯತ್ನಿಸಿದ್ದಾರೆ. ಆದರೆ ಸಾಧ್ಯವಾಗದಿದ್ದಾಗ ಹೋಟೆಲ್ ಮಾನೇಜರ್ ಗೆ ವಿಷಯ ತಿಳಿಸಿದ್ದಾನೆ. ಮ್ಯಾನೇಜರ್ ಕೂಡಲೇ ಪೊಲೀಸರಿಗೆ ಮಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣ ದಂಪತಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ಸಂಬಂಧ ಪೊಲೀಸರು ಕೊಲೆ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT