ಕ್ರಿಶ್ಚಿಯನ್ ಮೈಕೆಲ್ 
ದೇಶ

ವಿವಿಐಪಿ ಹಗರಣದ ವಿಚಾರಣೆ: ಆತಂಕ, ಕೋಪೋದ್ರಿಕ್ತನಾದ ಕ್ರಿಶ್ಚಿಯನ್ ಮೈಕೆಲ್; ಲಂಚ ಆರೋಪ ನಿರಾಕರಣೆ!

ದುಬೈ ನಿಂದ ಗಡಿಪಾರಾಗಿ ಭಾರತಕ್ಕೆ ಬಂದಿರುವ ಬಹುಕೋಟಿ ವಿವಿಐಪಿ ಚಾಪರ್ ಹಗರಣದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಯುಪಿಎ ಸರ್ಕಾರದಿಂದ ಲಂಚ ತೆಗೆದುಕೊಂಡಿರುವ

ನವದೆಹಲಿ: ದುಬೈ ನಿಂದ ಗಡಿಪಾರಾಗಿ ಭಾರತಕ್ಕೆ ಬಂದಿರುವ ಬಹುಕೋಟಿ ವಿವಿಐಪಿ ಚಾಪರ್ ಹಗರಣದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಯುಪಿಎ ಸರ್ಕಾರದಿಂದ ಲಂಚ ತೆಗೆದುಕೊಂಡಿರುವ ಆರೋಪವನ್ನು ಸಿಬಿಐ ಅಧಿಕಾರಿಗಳೆದುರು ಖಡಾಖಂಡಿತವಾಗಿ ನಿರಾಕರಿಸಿದ್ದಾರೆ.  
ಸಿಬಿಐ ವಶದಲ್ಲಿರುವ ಮೈಕೆಲ್, ಮುಖ್ಯಕಚೇರಿಯಲ್ಲಿ ತೀವ್ರ ಆತಂಕಕ್ಕೊಳಗಾಗಿದ್ದು, ವೈದ್ಯರು ತಪಾಸಣೆ ನಡೆಸಬೇಕಾಯಿತು. ತಪಾಸಣೆ, ಚಿಕಿತ್ಸೆಯ ಬಳಿಕ ನಡೆದ ವಿಚಾರಣೆಯಲ್ಲಿ ಹಣ ವರ್ಗಾವಣೆ ಹಾಗೂ ಡೈರಿಯಲ್ಲಿರುವ ಸಾಕ್ಷ್ಯಗಳ ದಾಖಲೆಗಳನ್ನು ಗುರುತಿಸುವುದಕ್ಕೆ ಸಂಬಂಧಪಟ್ಟಂತೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಕ್ರಿಶ್ಚಿಯನ್ ಮೈಕೆಲ್,  ತನಗೆ ಡಿಸ್ಲೆಕ್ಸಿಯಾ (ಬರೆದಿರುವುದನ್ನು ವಿವರಿಸಲು ವಿಫಲವಾಗುವ ಅಥವ ಕಷ್ಟ ಎದುರಿಸುವ ಸಮಸ್ಯೆ)  ಇದ್ದು ಲಂಚ ನೀಡಿರುವ ಡೈರಿಯಲ್ಲಿ ಬರೆದಿರುವುದು ಮತ್ತೋರ್ವ ಮಧ್ಯವರ್ತಿ ಗಿಡೋ ಹಶ್ಚೆ  ಎಂದು ಬಾಯಿಬಿಟ್ಟಿದ್ದಾರೆ. 
ಲಂಚ ನೀಡಿರುವ ಬಗ್ಗೆ ಬರೆಯಲಾಗಿರುವ ಚೀಟಿಯಲ್ಲಿ ಸರ್ಕಾರದ ಹಲವು ಅಧಿಕಾರಿಗಳು, ಮುಖ್ಯಸ್ಥರ ಹೆಸರೂ ಉಲ್ಲೇಖವಾಗಿದೆ. ಇದರಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿವಿಐಪಿ ಚಾಪರ್ಸ್ ಹಗರಣದ ಚಾಲನಾ ಶಕ್ತಿಯೆಂದು ಉಲ್ಲೇಖಿಸಲಾಗಿದೆ. 
ಹಗರಣದ ಸಂಬಂಧ ತನ್ನೊಂದಿಗೆ ತಳುಕು ಹಾಕಿಕೊಂಡಿರುವ ಭಾರತೀಯ ರಾಜಕಾರಣಿಗಳನ್ನು ರಕ್ಷಿಸುವುದಕ್ಕಾಗಿ ಸಿಬಿಐ ಅಧಿಕಾರಿಗಳ ಎದುರು ಮತ್ತೋರ್ವ ಮಧ್ಯವರ್ತಿ ಗಿಡೋ ಹಶ್ಚೆ ಹೆಸರನ್ನು ಬಾಯಿಬಿಟ್ಟಿರುವ ಕ್ರಿಶ್ಚಿಯನ್ ಮೈಕೆಲ್, ಆರೋಪವನ್ನು ಈಗ  ಗಿಡೋ ಹಶ್ಚೆ ಮೇಲೆ ವರ್ಗಾವಣೆ ಮಾಡುತ್ತಿದ್ದಾನೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT