ಕ್ರಿಶ್ಚಿಯನ್ ಮೈಕೆಲ್ 
ದೇಶ

ವಿವಿಐಪಿ ಹಗರಣದ ವಿಚಾರಣೆ: ಆತಂಕ, ಕೋಪೋದ್ರಿಕ್ತನಾದ ಕ್ರಿಶ್ಚಿಯನ್ ಮೈಕೆಲ್; ಲಂಚ ಆರೋಪ ನಿರಾಕರಣೆ!

ದುಬೈ ನಿಂದ ಗಡಿಪಾರಾಗಿ ಭಾರತಕ್ಕೆ ಬಂದಿರುವ ಬಹುಕೋಟಿ ವಿವಿಐಪಿ ಚಾಪರ್ ಹಗರಣದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಯುಪಿಎ ಸರ್ಕಾರದಿಂದ ಲಂಚ ತೆಗೆದುಕೊಂಡಿರುವ

ನವದೆಹಲಿ: ದುಬೈ ನಿಂದ ಗಡಿಪಾರಾಗಿ ಭಾರತಕ್ಕೆ ಬಂದಿರುವ ಬಹುಕೋಟಿ ವಿವಿಐಪಿ ಚಾಪರ್ ಹಗರಣದ ಪ್ರಮುಖ ಆರೋಪಿ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಯುಪಿಎ ಸರ್ಕಾರದಿಂದ ಲಂಚ ತೆಗೆದುಕೊಂಡಿರುವ ಆರೋಪವನ್ನು ಸಿಬಿಐ ಅಧಿಕಾರಿಗಳೆದುರು ಖಡಾಖಂಡಿತವಾಗಿ ನಿರಾಕರಿಸಿದ್ದಾರೆ.  
ಸಿಬಿಐ ವಶದಲ್ಲಿರುವ ಮೈಕೆಲ್, ಮುಖ್ಯಕಚೇರಿಯಲ್ಲಿ ತೀವ್ರ ಆತಂಕಕ್ಕೊಳಗಾಗಿದ್ದು, ವೈದ್ಯರು ತಪಾಸಣೆ ನಡೆಸಬೇಕಾಯಿತು. ತಪಾಸಣೆ, ಚಿಕಿತ್ಸೆಯ ಬಳಿಕ ನಡೆದ ವಿಚಾರಣೆಯಲ್ಲಿ ಹಣ ವರ್ಗಾವಣೆ ಹಾಗೂ ಡೈರಿಯಲ್ಲಿರುವ ಸಾಕ್ಷ್ಯಗಳ ದಾಖಲೆಗಳನ್ನು ಗುರುತಿಸುವುದಕ್ಕೆ ಸಂಬಂಧಪಟ್ಟಂತೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿರುವ ಕ್ರಿಶ್ಚಿಯನ್ ಮೈಕೆಲ್,  ತನಗೆ ಡಿಸ್ಲೆಕ್ಸಿಯಾ (ಬರೆದಿರುವುದನ್ನು ವಿವರಿಸಲು ವಿಫಲವಾಗುವ ಅಥವ ಕಷ್ಟ ಎದುರಿಸುವ ಸಮಸ್ಯೆ)  ಇದ್ದು ಲಂಚ ನೀಡಿರುವ ಡೈರಿಯಲ್ಲಿ ಬರೆದಿರುವುದು ಮತ್ತೋರ್ವ ಮಧ್ಯವರ್ತಿ ಗಿಡೋ ಹಶ್ಚೆ  ಎಂದು ಬಾಯಿಬಿಟ್ಟಿದ್ದಾರೆ. 
ಲಂಚ ನೀಡಿರುವ ಬಗ್ಗೆ ಬರೆಯಲಾಗಿರುವ ಚೀಟಿಯಲ್ಲಿ ಸರ್ಕಾರದ ಹಲವು ಅಧಿಕಾರಿಗಳು, ಮುಖ್ಯಸ್ಥರ ಹೆಸರೂ ಉಲ್ಲೇಖವಾಗಿದೆ. ಇದರಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿವಿಐಪಿ ಚಾಪರ್ಸ್ ಹಗರಣದ ಚಾಲನಾ ಶಕ್ತಿಯೆಂದು ಉಲ್ಲೇಖಿಸಲಾಗಿದೆ. 
ಹಗರಣದ ಸಂಬಂಧ ತನ್ನೊಂದಿಗೆ ತಳುಕು ಹಾಕಿಕೊಂಡಿರುವ ಭಾರತೀಯ ರಾಜಕಾರಣಿಗಳನ್ನು ರಕ್ಷಿಸುವುದಕ್ಕಾಗಿ ಸಿಬಿಐ ಅಧಿಕಾರಿಗಳ ಎದುರು ಮತ್ತೋರ್ವ ಮಧ್ಯವರ್ತಿ ಗಿಡೋ ಹಶ್ಚೆ ಹೆಸರನ್ನು ಬಾಯಿಬಿಟ್ಟಿರುವ ಕ್ರಿಶ್ಚಿಯನ್ ಮೈಕೆಲ್, ಆರೋಪವನ್ನು ಈಗ  ಗಿಡೋ ಹಶ್ಚೆ ಮೇಲೆ ವರ್ಗಾವಣೆ ಮಾಡುತ್ತಿದ್ದಾನೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT