ಉತ್ತರ ಪ್ರದೇಶ: ದಲಿತ ಹೇಳಿಕೆ ಬೆನ್ನಲ್ಲೇ ಹನುಮಂತನ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ! 
ದೇಶ

ಉತ್ತರ ಪ್ರದೇಶ: ದಲಿತ ಹೇಳಿಕೆ ಬೆನ್ನಲ್ಲೇ ಹನುಮಂತನ ಜಾತಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಕೆ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಮಾಯಣದ ಹನುಮಂತ ದಲಿತನಾಗಿದ್ದ ಎಂದು ಹೇಳಿದ್ದೇ ತಡ, ಹನುಮಂತನ ಜಾತಿಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಲೇ ಇದೆ.

ವಾರಾಣಸಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಮಾಯಣದ ಹನುಮಂತ ದಲಿತನಾಗಿದ್ದ ಎಂದು ಹೇಳಿದ್ದೇ ತಡ, ಹನುಮಂತನ ಜಾತಿಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಲೇ ಇದೆ. ಈ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಹನುಮಂತನ ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. 
ಶಿವಪಾಲ್ ಯಾದವ್ ಅವರ ಪ್ರಗತಿಶೀಲ್ ಸಮಾಜವಾದಿ ಪಕ್ಷ (ಲೋಹಿಯಾ) ಪಕ್ಷ ಜಿಲ್ಲಾಡಳಿತಕ್ಕೆ ಹನುಮಂತನ ಜಾತಿಯ ಪ್ರಮಾಣಪತ್ರ ನೀಡುವಂತೆ ಅರ್ಜಿ ಸಲ್ಲಿಸಿದ್ದು, ಒಂದು ವೇಳೆ ಒಂದು ವಾರದಲ್ಲಿ ಜಿಲ್ಲಾಡಳಿತ ಪ್ರಮಾಣಪತ್ರ ನೀಡಲು ವಿಫಲವಾದರೆ ಧರಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ. 
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಇತ್ತೀಚೆಗಷ್ಟೇ ಹನುನಂತನನ್ನು ದಲಿತ ಎಂದು ಹೇಳಿದ್ದರು. ನಾವು ಭಗವಾನ್ ಹನುನಂತನ ಜಾತಿ ಪ್ರಮಾಣಪತ್ರಕ್ಕಾಗಿ ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿಗಳು ಭಗವಾನ್ ನ್ನು ಕ್ಷುಲ್ಲಕ ಜಾತಿ ರಾಜಕಾರಣಕ್ಕೆ ಎಳೆದು ತಂದಿದ್ದಾರೆ. ಆದ್ದರಿಂದ ಜಾತಿ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ್ದೇವೆ ಎಂದು ಪಿಎಸ್ ಪಿಎಲ್ ಯುವಮೋರ್ಚಾದ ಜಿಲ್ಲಾಅಧ್ಯಕ್ಷ ಹರೀಶ್ ಮಿಶ್ರಾ ಹೇಳಿದ್ದಾರೆ.
ಹನುಮಂತನ ಫೋಟೊ ಹಾಗೂ ಆತನ ತಂದೆ ಮಹಾರಾಜ್ ಕೇಸರಿ ಹಾಗೂ ತಾಯಿ ಅಂಜನಾ ದೇವಿ ಎಂಬ ಮಾಹಿತಿ ನೀಡಲಾಗಿದ್ದು, ಸಂಕಟ್ ಮೋಚನ ದೇವಾಲಯ ಆತನ ನಿವಾಸವೆಂದು ಅರ್ಜಿಯಲ್ಲಿ ನಮೂದಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT