ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇ 
ದೇಶ

ಶರದ್ ಯಾದವ್ ಹೇಳಿಕೆಯಿಂದ ಅವಮಾನವಾದಂತಾಗಿದೆ: ವಸುಂದರಾ ರಾಜೇ

ತಮ್ಮ ಫಿಟ್ನೆಸ್ ಕುರಿತು ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ ಶರದ್ ಯಾವದ್ ಅವರ ವಿರುದ್ಧ ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇಯವರು ತೀವ್ರವಾಗಿ ಕಿರಿಕಾರಿದ್ದಾರೆ...

ರಾಜಸ್ಥಾನ: ತಮ್ಮ ಫಿಟ್ನೆಸ್ ಕುರಿತು ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ ಶರದ್ ಯಾವದ್ ಅವರ ವಿರುದ್ಧ ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇಯವರು ತೀವ್ರವಾಗಿ ಕಿರಿಕಾರಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಪ್ರಚಾರವೊಂದರಲ್ಲಿ ಮಾತನಾಡಿದ್ದ ಯಾದವ್ ಅವರು, ವಸುಂದರಾ ರಾಜೇ ಅವರಿಗೆ ಸ್ವಲ್ಪ ವಿಶ್ರಾಂತಿಯ ಅಗತ್ಯವಿದೆ. ಅವರಿಗೆ ಅವರ ಆರೋಗ್ಯ ಹಾಗೂ ದೇಹದ ಸೌಂದರ್ಯದ ಕುರಿತು ಕಾಳಜಿ ವಹಿಸಲು ಸಮಯವೇ ಇಲ್ಲದಂತಾಗಿದೆ. ಆ ಕಾರಣಕ್ಕಾದರೂ ನೀವು ಈ ಬಾರಿ ಬಿಜೆಪಿಗೆ ವಿಶ್ರಾಂತಿ ನೀಡಬೇಕು. ಸಿಎಂ ವಸುಂದರಾ ರಾಜೇ ಬಹಳ ಸುಸ್ತಾಗಿದ್ದಾರ. ಅವರಿಗೆ ರಾಜಕೀಯದಿಂದ ಸ್ವಲ್ಪ ಬಿಡುವು ನೀಡೋಣ. ಮೊದಲೆಲ್ಲಾ ಸಣಣಗಿದ್ದರು. ಈಗ ತಮ್ಮ ಬಗ್ಗೆ ಕಾಳಜಿ ವಹಿಸಲು ಬಿಡುವಿಲ್ಲದೆ. ಯಾವ ರೀತಿ ದಪ್ಪಾಗಾಗಿದ್ದಾರೆ ನೋಡಿ. ಆಕೆ ನಮ್ಮ ಮಧ್ಯಪ್ರದೇಶದ ಮಗಳು, ಆಕೆಯ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿಯೂ ಹೌದು ಎಂದು ಗೇಲಿ ಮಾಡಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಸುಂದರಾ ರಾಜೇಯವರು, ಯಾದವ್ ಅವರ ಹೇಳಿಕೆಯಿಂದ ನನಗೆ ಅವಮಾನವಾದಂತಾಗಿದೆ. ಮಹಿಳೆಯರಿಗೂ ಅವಮಾನ ಮಾಡಿದಂತಾಗಿದೆ. ಯಾವುದೇ ನಾಯಕರ ವಿರುದ್ಧ ನಾವು ವೈಯಕ್ತಿಕವಾಗಿ ಹೇಳಿಕೆ ನೀಡಿಲ್ಲ. ಇದು ನಾಗರೀಕ ವರ್ತನೆಯಲ್ಲ. ಇಂತಹ ಭಾಷೆ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಂಡು ಮುಂದೆಂದೂ ಈ ರೀತಿ ಆಗದಂತೆ, ಇದೊಂದು ಉದಾಹರಣೆಯಾಗುವಂತೆ ಮಾಡಬೇಕೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!