ನಿತಿನ್ ಗಡ್ಕರಿ 
ದೇಶ

ಮಹಾರಾಷ್ಟ್ರ: ವೇದಿಕೆ ಮೇಲೆಯೇ ಕುಸಿದು ಬಿದ್ದ ಕೇಂದ್ರ ಸಚಿವ ಗಡ್ಕರಿ

ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದಲ್ಲಿ ನಡೆದ ವಿಶ್ವವಿದ್ಯಾನಿಲಯದ ಕಾರ್ಯಕ್ರಮವೊಂದರಲ್ಲಿ ಹಠಾತ್ತನೆ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.

ಅಹಮದ್ ನಗರ(ಮಹಾರಾಷ್ಟ್ರ): ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದಲ್ಲಿ ನಡೆದ ವಿಶ್ವವಿದ್ಯಾನಿಲಯದ ಕಾರ್ಯಕ್ರಮವೊಂದರಲ್ಲಿ ಹಠಾತ್ತನೆ ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ.
ಮಹಾರಾಷ್ಟ್ರದ ಅಹಮದ್ ನಗರದ ರಹುರಿಯಲ್ಲಿರುವ  ಮಹಾತ್ಮ ಫುಲೆ ಕೃಷಿ ವಿದ್ಯಾಪೀಠ (ಎಂಪಿಕೆವಿ) ಕೃಷಿ ವಿಶ್ವವಿದ್ಯಾನಿಕಯದ ಸಮಾರಂಭದಲ್ಲಿ ಭಾಗವಹಿಸಿದ್ದ ಗಡ್ಕರಿ ರಾಷ್ಟ್ರಗೀತೆ ಹಾಡುವ ವೇಳೆ ಇತರೆ ಗಣ್ಯರೊಡನೆ ವೇದಿಕೆ ಮೇಲೆ ನಿಂತಿದ್ದಾಗ ಕುಸಿದು ಬಿದ್ದಿದ್ದಾರೆ.
ತೀವ್ರ ನಿತ್ರಾಣದಿಂದ ಕಣ್ಣಿಗೆ ಮಂಜು ಕವಿದಂತಾಗಿ ಅವರು ಕುಸಿದಾಗ ಪಕ್ಕದಲ್ಲಿದ್ದ ಭದ್ರತಾ ಸಿಬ್ಬಂದಿ ಅವರ ನೆರವಿಗೆ ಧಾವಿಸಿ ಉಪಚರಿಸಿದ್ದಾರೆ.
ಮಹಾರಾಷ್ಟ್ರ ಗವರ್ನರ್ ಸಿ. ವಿ. ರಾವ್ ಮತ್ತು ಇತರ ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಗಡ್ಕರಿ ಮುಖ್ಯ ಅತಿಥಿಗಳಗಿದ್ದರು.
ದೇಹದಲ್ಲಿನ ಸಕ್ಕರೆ ಅಂಶ ಕಡಿಮೆಯಾಗಿದ್ದ ಕಾರಣ (ಲೋ ಶುಗರ್) ಅವರು ನಿತ್ರಾಣಗೊಂಡಿದ್ದಾರೆ ಎಂದು ಅವರ ಪರೀಕ್ಷೆ ನಡೆಸಿದ ವೈದ್ಯಕೀಯ ತಂಡ ಹೇಳಿದೆ.ಸಧ್ಯ ಅವರ ಆರೋಗ್ಯ ಥಿತಿ "ಸ್ಥಿರ" ವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT