ಶರದ್ ಯಾದವ್ 
ದೇಶ

ವಸುಂದರಾ ರಾಜೇ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ: ಶರದ್ ಯಾದವ್ ಸ್ಪಷ್ಟನೆ

ವಸುಂದರಾ ರಾಜೇಯವರ ಫಿಟ್ನೆಸ್ ಕುರಿತಂತೆ ಹೇಳಿಕೆ ನೀಡಿ ತೀವ್ರ ಟೀಕೆಗಳಿಗೆ ಗುರಿಯಾಗಿರುವ ಜೆಡಿಯು ಮಾಜಿ ನಾಯಕ ಶರದ್ ಯಾದವ್ ಅವರು ಶುಕ್ರವಾರ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದು, ರಾಜೇ ವಿರುದ್ಧ ಯಾವುದೇ...

ಜೈಪುರ: ವಸುಂದರಾ ರಾಜೇಯವರ ಫಿಟ್ನೆಸ್ ಕುರಿತಂತೆ ಹೇಳಿಕೆ ನೀಡಿ ತೀವ್ರ ಟೀಕೆಗಳಿಗೆ ಗುರಿಯಾಗಿರುವ ಜೆಡಿಯು ಮಾಜಿ ನಾಯಕ ಶರದ್ ಯಾದವ್ ಅವರು ಶುಕ್ರವಾರ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದು, ರಾಜೇ ವಿರುದ್ಧ ಯಾವುದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸುಂದರಾ ರಾಜೇ ವಿರುದ್ದ ನಾನು ಯಾವುದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಅದೊಂದು ಹಾಸ್ಯಸ್ಪದವಷ್ಟೇ. ರಾಜೇ ಜೊತೆಯಲ್ಲಿ ಬಹಳ ಹಿಂದಿನಿಂದಲೂ ನಂಟು ಹೊಂದಿದ್ದೆ. ನಾನು ನೀಡಿದ್ದ ಹೇಳಿಕೆ ಅವಹೇಳನಕಾರಿಯಾಗಿರಲಿಲ್ಲ ಎಂದು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಪ್ರಚಾರವೊಂದರಲ್ಲಿ ಮಾತನಾಡಿದ್ದ ಯಾದವ್ ಅವರು, ವಸುಂದರಾ ರಾಜೇ ಅವರಿಗೆ ಸ್ವಲ್ಪ ವಿಶ್ರಾಂತಿಯ ಅಗತ್ಯವಿದೆ. ಅವರಿಗೆ ಅವರ ಆರೋಗ್ಯ ಹಾಗೂ ದೇಹದ ಸೌಂದರ್ಯದ ಕುರಿತು ಕಾಳಜಿ ವಹಿಸಲು ಸಮಯವೇ ಇಲ್ಲದಂತಾಗಿದೆ. ಆ ಕಾರಣಕ್ಕಾದರೂ ನೀವು ಈ ಬಾರಿ ಬಿಜೆಪಿಗೆ ವಿಶ್ರಾಂತಿ ನೀಡಬೇಕು. ಸಿಎಂ ವಸುಂದರಾ ರಾಜೇ ಬಹಳ ಸುಸ್ತಾಗಿದ್ದಾರ. ಅವರಿಗೆ ರಾಜಕೀಯದಿಂದ ಸ್ವಲ್ಪ ಬಿಡುವು ನೀಡೋಣ. ಮೊದಲೆಲ್ಲಾ ಸಣಣಗಿದ್ದರು. ಈಗ ತಮ್ಮ ಬಗ್ಗೆ ಕಾಳಜಿ ವಹಿಸಲು ಬಿಡುವಿಲ್ಲದೆ. ಯಾವ ರೀತಿ ದಪ್ಪಾಗಾಗಿದ್ದಾರೆ ನೋಡಿ. ಆಕೆ ನಮ್ಮ ಮಧ್ಯಪ್ರದೇಶದ ಮಗಳು, ಆಕೆಯ ಆರೋಗ್ಯ ಕಾಪಾಡುವುದು ನಮ್ಮ ಜವಾಬ್ದಾರಿಯೂ ಹೌದು ಎಂದು ಗೇಲಿ ಮಾಡಿದ್ದರು. 
ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಜೇ ಅವರು, ಯಾದವ್ ಅವರ ಹೇಳಿಕೆಯಿಂದ ನನಗೆ ಅವಮಾನವಾಗಿದೆ. ಯಾದವ್ ಹೇಳಿಕೆ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!