ನರೇಂದ್ರ ಮೋದಿ , ಅಮಿತ್ ಶಾ 
ದೇಶ

ಬಿಜೆಪಿಗೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಭೀತಿ ಆವರಿಸಿದೆ- ಕಾಂಗ್ರೆಸ್

ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಆಳಿಯ ರಾಬರ್ಟ್ ವಾದ್ರಾ ಸಹಚರರ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ನಂತರ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ.

ನವದೆಹಲಿ:  ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅವರ ಆಳಿಯ ರಾಬರ್ಟ್ ವಾದ್ರಾ  ಸಹಚರರ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ನಂತರ  ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ.
ಜನರನ್ನು ಭೀತಿಗೊಳಿಸುವ ರೀತಿಯಲ್ಲಿ ಮೋದಿ ಏನೆಲ್ಲಾ ತಂತ್ರಗಳನ್ನು ಅನುಸರಿಸಿದ್ದರೂ ಬಿಜೆಪಿ ಆಡಳಿತವಿದ್ಧ ರಾಜ್ಯಗಳಲ್ಲಿಯೇ  ಸೋಲಿನ ಭೀತಿ ಆವರಿಸಿದೆ ಎಂದು ಕಾಂಗ್ರೆಸ್ ಹೇಳಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ವಕ್ತಾರ ಅಭಿಷೇಕ್ ಮನು ಸಿಂಘ್ವಿ, ಸಂವಿಧಾನ ಜಾರಿಯಾದ ನಂತರ ಇಂತಹ ಟೆರರ್ ರಾಜ್ಯವನ್ನು  ನೋಡಿರಲಿಲ್ಲ ಎಂದು ಆರೋಪಿಸಿದರು.ಬ್ರಿಟಿಷ್ ರಾಜ್ ವಿರುದ್ಧ  ಹೋರಾಟ ನಡೆಸಿದ್ದು, ಮತ ಎಣಿಕೆ ದಿನ ಬಿಜೆಪಿಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಹಾಗೂ ಅದರ ಮೌಲ್ಯಗಳಿಂದ ಭಯಭೀತರಾಗಿದ್ದು, ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ.  ಪಕ್ಷದ ನಾಯಕರು ಅಥವಾ ಅವರ ಸಹಚರರ ವಿರುದ್ಧ ಅತ್ಯುನ್ನತ ತಂತ್ರಗಳನ್ನು  ಬಳಸಿಕೊಳ್ಳಲಾಗುತ್ತಿದೆ. ಇದಕ್ಕೆ ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶವೇ ತಕ್ಕ ಉತ್ತರವಾಗಲಿದೆ ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT