ಬುಲಂದ್'ಶೆಹರ್ ಹಿಂಸಾಚಾರ: ಘರ್ಷಣೆ ನಿಯಂತ್ರಿಸುವಲ್ಲಿ ವಿಫಲ, 3 ಪೊಲೀಸ್ ಅಧಿಕಾರಿಗಳ ವರ್ಗಾವಣೆ 
ದೇಶ

ಬುಲಂದ್'ಶೆಹರ್ ಹಿಂಸಾಚಾರ: ಘರ್ಷಣೆ ನಿಯಂತ್ರಿಸುವಲ್ಲಿ ವಿಫಲ, 3 ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಬುಲಂದ್'ಶೆಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘರ್ಷಣೆ ನಿಯಂತ್ರಿಸಲು ವಿಫಲರಾದ ಮೂವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...

ಲಖನೌ: ಬುಲಂದ್'ಶೆಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘರ್ಷಣೆ ನಿಯಂತ್ರಿಸಲು ವಿಫಲರಾದ ಮೂವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 
ಹೆಚ್ಚುವರಿ ಡಿಜಿ ಎಸ್.ಬಿ.ಶಿರಾಡ್ಕರ್ ಅವರು ಸಲ್ಲಿಸಿದ್ದ ವರದಿಯನ್ನು ಪರಿಶೀಲನೆ ನಡೆಸಿರುವ ಉತ್ತರಪ್ರದೇಶ ಸರ್ಕಾರ, ಸರ್ಕಲ್ ಆಫೀಸರ್ ಸತ್ಯ ಪ್ರಕಾಶ್ ಶರ್ಮಾ, ಛಿಂಗ್ರಾವತಿ ಪೊಲೀಸ್ ಠಾಣಾಧಿಕಾರಿ ಸುರೇಶ್ ಕುಮಾರ್, ಬುಲಂದ್ ಶೆಹರ್ ಹಿರಿಯ ಎಸ್'ಪಿ ಕೃಷ್ಣ ಬಹದ್ದೂರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 
ಪ್ರಕಱಣ ಸಂಬಂಧ ಡಿಜಿಪಿ ಒ.ಪಿ.ಸಿಂಗ್ ಅವರೊಂಮದಿಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದರು. ಮಾತುಕತೆ ವೇಳೆ ಒ.ಪಿ. ಸಿಂಗ್ ಆವರು ವರದಿಯನ್ನು ಯೋಗಿ ಆದಿತ್ಯನಾಥ್ ಅವರಿಗೆ ನೀಡಿದ್ದು, ವರದಿಯಲ್ಲಿ ಅಧಿಕಾರಿಗಳ ದೋಷಗಳಿರುವ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 
ಈ ನಡುವೆ ಪ್ರಕಱಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್ ಅವರು, ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣ ಆಕಸ್ಮಿಕವಷ್ಟೇ ಎಂದು ಹೇಳಿದ್ದಾರೆ. 
ಉತ್ತರಪ್ರದೇಶದಲ್ಲಿ ಕೋಮು ಘರ್ಷಣೆ ನಡೆದಿಲ್ಲ. ಬುಲಂದ್ ಶೆಹರ್'ನಲ್ಲಿ ನಡೆದಿರುವ ಆಕಸ್ಮಿಕ ಘಟನೆಯಷ್ಟೇ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡು ವಿಧಾನಸಭೆಯಲ್ಲಿ ಭಾರೀ ಹೈಡ್ರಾಮಾ: ಸಿಎಂ ಜೋಸೆಫ್ ವಿಜಯ್ ಆರೋಪಕ್ಕೆ DMK ಆಕ್ರೋಶ, ಸದನದಿಂದ ಶಾಸಕರು ಹೊರಕ್ಕೆ..!

ಯಶವಂತಪುರ APMCಗೆ ಸಿಎಂ ದಿಢೀರ್ ಭೇಟಿ: ರೈತರ ಅಹವಾಲು ಆಲಿಸಿದ ಡಿಕೆ ಶಿವಕುಮಾರ್, Video

‘ರೀಲ್ಸ್‌’ ಗೀಳು; ಇಂಟರ್‌ನೆಟ್‌ ಕೈಕೊಟ್ಟಿದ್ದಕ್ಕೆ ಬೇಸರ, ಮಹಿಳೆ ಆತ್ಮಹತ್ಯೆಗೆ ಶರಣು!

'ಹನುಮಾನ್ ಚಾಲೀಸಾ ಹೇಳಬೇಕು'; ನವರಾತ್ರಿ ಗರ್ಬಾಗೆ ಮುಸ್ಲಿಮರಿಗೆ ನಿರ್ಬಂಧ? VHP ಕರೆ ಬೆಂಬಲಿಸಿದ ಮಹಾರಾಷ್ಟ್ರ ಸಚಿವ, ಹೇಳಿದ್ದೇನು?

ಬಳ್ಳಾರಿ ಚಲೋ ಸಮಾರೋಪಕ್ಕೆ ಬಿಗ್ ಶಾಕ್: ಬಿಜೆಪಿ ಸಮಾವೇಶಕ್ಕೆ ಶಾಲಾ ಮೈದಾನ ನೀಡಲು ಸರ್ಕಾರದ ನಕಾರ! ‘ಜಾಗ ಹೇಗೆ ಕೊಡಲ್ಲ ನೋಡ್ತೀವಿ’ ಎಂದು ವಿಜಯೇಂದ್ರ ಸವಾಲು