ವಿಜಯ್ ಮಲ್ಯ 
ದೇಶ

ಮಲ್ಯ ಹಸ್ತಾಂತರ ಪ್ರಕರಣ: ಲಂಡನ್ ಗೆ ತೆರಳಿದ ಸಿಬಿಐ ಜಂಟಿ ನಿರ್ದೇಶಕರು

ಮದ್ಯ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ವಿಚಾರಣೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿಬಿಐ ಜಂಟಿ ನಿರ್ದೇಶಕ ಎಸ್ . ಸಾಯಿ ಮನೋಹರ್ ಅವರ ನೇತೃತ್ವದಲ್ಲಿನ ಅಧಿಕಾರಿಗಳ ತಂಡ ಲಂಡನ್ ಗೆ ತೆರಳಿದೆ.

ನವದೆಹಲಿ: ಮದ್ಯ ಉದ್ಯಮಿ ವಿಜಯ್ ಮಲ್ಯ ಹಸ್ತಾಂತರ ಪ್ರಕರಣದ ವಿಚಾರಣೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಸಿಬಿಐ ಜಂಟಿ ನಿರ್ದೇಶಕ ಎಸ್ . ಸಾಯಿ ಮನೋಹರ್ ಅವರ ನೇತೃತ್ವದಲ್ಲಿನ  ಅಧಿಕಾರಿಗಳ ತಂಡ ಲಂಡನ್ ಗೆ ತೆರಳಿದೆ.

ಈವರೆಗಿನ ವಿಚಾರಣೆಗಳಲ್ಲಿ ವಿಶೇಷ ಸಿಬಿಐ ನಿರ್ದೇಶಕ ರಾಕೇಶ್ ಅಸ್ತಾನಾ ಪಾಲ್ಗೊಂಡಿದ್ದರು. ಆದರೆ , ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ನಡುವಿನ ಒಳ ಜಗಳದ ಹಿನ್ನೆಲೆಯಲ್ಲಿ ಸರ್ಕಾರ ಅಸ್ತಾನ ಅವರನ್ನು ಬಲವಂತವಾಗಿ ರಜೆ ಮೇಲೆ ಕಳುಹಿಸಿದ್ದು, ಈಗ ಮನೋಹರ್  ಅವರು ಮಲ್ಯ ಹಸ್ತಾಂತರ ಪ್ರಕರಣ ವಿಚಾರಣೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಸಿಬಿಐ ಅಧಿಕಾರಿಗಳೊಂದಿಗೆ ಇಬ್ಬರು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಹ ಲಂಡನ್ ಗೆ ತೆರಳಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ವಿಜಯ್ ಮಲ್ಯ  ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ರೂಪಾಯಿ ವಂಚಿಸಿ  2016 ಮಾರ್ಚ್ ತಿಂಗಳಿಂದ ಲಂಡನ್ ನಲ್ಲಿದ್ದಾರೆ.ಆತನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗಳು ಲಂಡನ್ ಸರ್ಕಾರದಲ್ಲಿ ಮನವಿ ಮಾಡಿಕೊಂಡಿವೆ. ಈ ಸಂಬಂಧ ವಿಚಾರಣೆ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸೋಮವಾರ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT