ಮುಕ್ತಾರ್ ಅಬ್ಬಾಸ್ ನಖ್ವೀ 
ದೇಶ

2 ಸಾವಿರಕ್ಕೂ ಹೆಚ್ಚಿನ ಮುಸ್ಲಿಂ ಮಹಿಳೆಯರು ಪುರುಷರ ಜೊತೆ ಇಲ್ಲದೆ ಹಜ್ ಯಾತ್ರೆ ಸಾಧ್ಯತೆ- ನಖ್ವೀ

ಮುಂದಿನ ವರ್ಷ ಪುರುಷರ ಜೊತೆ ಇಲ್ಲದೆ ದೊಡ್ಡ ಸಂಖ್ಯೆಯ ಮುಸ್ಲಿಂ ಮಹಿಳೆಯರು ಹಜ್ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇರುವುದಾಗಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವೀ ಹೇಳಿದ್ದಾರೆ.

ನವದಹೆಲಿ: ಮುಂದಿನ ವರ್ಷ ಪುರುಷರ ಜೊತೆ ಇಲ್ಲದೆ   ದೊಡ್ಡ ಸಂಖ್ಯೆಯ ಮುಸ್ಲಿಂ ಮಹಿಳೆಯರು ಹಜ್ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇರುವುದಾಗಿ  ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವೀ ಹೇಳಿದ್ದಾರೆ.

ಹಜ್   ಸಹಯೋಗದ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಮುಖ್ತಾರ್ ಅಬ್ಬಾಸ್ ನಖ್ವೀ,   2019ರ ಹಜ್  ಯಾತ್ರೆಗಾಗಿ ಈವರೆಗೂ ಭಾರತದ ಹಜ್ ಸಮಿತಿ 2 ಲಕ್ಷದ 23 ಸಾವಿರ ಅರ್ಜಿಗಳನ್ನು ಸ್ವೀಕರಿಸಿದೆ ಎಂದು ತಿಳಿಸಿದರು.

ಸ್ವೀಕರಿಸಲಾಗಿರುವ ಒಟ್ಟಾರೇ 2 ಲಕ್ಷದ  23 ಸಾವಿರ ಅರ್ಜಿಗಳಲ್ಲಿ ಶೇ. 47 ರಷ್ಟು ಮಹಿಳೆಯರಿದ್ದಾರೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆಯಿಂದ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ನವೆಂಬರ್ 7 ರಿಂದ  ಅರ್ಜಿಯನ್ನು ಸ್ವೀಕರಿಸಲಾಗುತ್ತಿದ್ದು, ಡಿಸೆಂಬರ್ 12 ಕಡೆಯ ದಿನವಾಗಿದೆ.

 ಪುರುಷರ ಜೊತೆಯಲ್ಲಿಯೇ ಮುಸ್ಲಿಂ ಮಹಿಳೆಯರು ಹಜ್ ಯಾತ್ರೆ ಕೈಗೊಳ್ಳಬೇಕು ಎಂಬ ನಿಯಮವನ್ನು ಕೇಂದ್ರಸರ್ಕಾರ ನಿರ್ಬಂಧಿಸಿದ ಮೇಲೆ  ಹೆಚ್ಚಿನ ಸಂಖ್ಯೆಯ ಮಹಿಳೆಯರು ಪುರುಷರ ಜೊತೆ ಇಲ್ಲದೆ ಹಜ್ ಯಾತ್ರೆಗೆ ತೆರಳಲು ಅರ್ಜಿ ಸಲ್ಲಿಸಿದ್ದು, ಇದೇ ಮೊದಲ ಬಾರಿಗೆ ಪುರುಷರ ಜೊತೆ ಇಲ್ಲದೆ ಮುಸ್ಲಿಂ ಮಹಿಳೆಯರು ಹಜ್  ಯಾತ್ರೆ ತೆರಳುವ ಸಾಧ್ಯತೆ ಇರುವುದಾಗಿ ಅವರು ಹೇಳಿದ್ದಾರೆ.

ಲಾಟರಿ  ವ್ಯವಸ್ಥೆಯಿಂದ ವಿನಾಯಿತಿ ನೀಡಲಾಗಿದ್ದು,  ಭಾರತೀಯ ಮಹಿಳಾ ಯಾತ್ರಾರ್ಥಿಗಳ ನೆರವಿಗಾಗಿ 100 ಕ್ಕೂ ಹೆಚ್ಚು ಮಹಿಳಾ ಹಜ್ ಪ್ರತಿನಿಧಿಗಳನ್ನು ನಿಯೋಜಿಸಲಾಗಿದೆ.  ಸ್ವಾತಂತ್ರ್ಯ ನಂತರ  2018ರಲ್ಲಿ ದಾಖಲೆ ಪ್ರಮಾಣದಲ್ಲಿ 1, 75, 025  ಯಾವುದೇ ಸಬ್ಸಿಡಿ ಇಲ್ಲದೆ  ಹಜ್ ಯಾತ್ರೆ ಕೈಗೊಂಡಿರುವುದಾಗಿ  ಅವರು ತಿಳಿಸಿದ್ದಾರೆ.

2019ರ ಯಾತ್ರಾ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ಮಾಡಲಾಗುತ್ತಿದೆ. 1.36. 000 ಆನ್ ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆನ್ ಲೈನ್ ಪೋರ್ಟಲ್ ಗಾಗಿ ಪಿಟಿಓ- ಖಾಸಗಿ ಪ್ರವಾಸ ಅಪರೇಟರ್ಸ್  ಈಗಾಗಲೇ ಕಾರ್ಯಾರಂಭಿಸಿರುವುದಾಗಿ ನಖ್ವೀ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT