ಸಾಂದರ್ಭಿಕ ಚಿತ್ರ 
ದೇಶ

ಶ್ರೀನಗರ ಎನ್ ಕೌಂಟರ್ : ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ, ಕೆಲ ಭದ್ರತಾ ಸಿಬ್ಬಂದಿಗೆ ಗಾಯ

ಶ್ರೀನಗರ ಹೊರವಲಯ ಮುಜಗುಂದ್ ಪ್ರದೇಶದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ

ಶ್ರೀನಗರ:  ಶ್ರೀನಗರ ಹೊರವಲಯ ಮುಜಗುಂದ್ ಪ್ರದೇಶದಲ್ಲಿ  ನಡೆದ ಗುಂಡಿನ ಕಾಳಗದಲ್ಲಿ  ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.  ಕಾರ್ಯಾಚರಣೆ ವೇಳೆಯಲ್ಲಿ ಅನೇಕ ಭದ್ರತಾ ಸಿಬ್ಬಂದಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಮುಜಗುಂದ್ ಪ್ರದೇಶದಲ್ಲಿ ಉಗ್ರರು ಅಡಗಿರುವ  ಬಗ್ಗೆ ತಿಳಿದುಬಂದ ಮಾಹಿತಿ ಆಧಾರದ ಮೇಲೆ ವಿಶೇಷ ಕಾರ್ಯಾಚರಣೆ ತಂಡ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ತಂಡದಿದ ಜಂಟಿ ಕಾರ್ಯಾಚರಣೆ ನಡೆಸಲಾಯಿತು.ಎಲ್ಲಾ ಮಾರ್ಗಗಳನ್ನು ಮುಚ್ಚಿ, ಮನೆ ಮನೆ ಹುಡುಕುವ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಆದಾಗ್ಯೂ, ಭದ್ರತಾ ಪಡೆಗಳು ನಿರ್ದಿಷ್ಟ ಪ್ರದೇಶದತ್ತ ತೆರಳುತ್ತಿರುವಾಗ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ.
ಗುಂಡಿನ ಕಾಳಗ ವೇಳೆಯಲ್ಲಿ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿಗೆ ಗಾಯವಾಗಿದೆ . ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಮೃತ ಉಗ್ರರ ಶವಗಳನ್ನು ವಶಕ್ಕೆ ಪಡೆದಿಲ್ಲ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮುಂದಿನ ಸಿಜೆಐ ಯಾರು?: ಉತ್ತರಾಧಿಕಾರಿ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ

Dharmasthala Mass Burial Case: ಸಾಕ್ಷ್ಯಾಧಾರಗಳ ಕೊರತೆ, 'ಷಡ್ಯಂತ್ರ ಸೂತ್ರಧಾರರತ್ತ' ಎಸ್ ಐಟಿ ತನಿಖೆ!

ಹೈಕೋರ್ಟ್ ಸ್ಥಳಾಂತರ ಬೇಡಿಕೆ ಬಗ್ಗೆ ಪರಿಶೀಲನೆ: ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ; ಡಿ.ಕೆ ಶಿವಕುಮಾರ್

RSS ರಹಸ್ಯ ಸಂಘಟನೆಯಲ್ಲ- ಶತ್ರುಗಳೂ ಇಲ್ಲ: ನೆಹರು ಮರಿಮೊಮ್ಮಕ್ಕಳು ಅರ್ಥಮಾಡಿಕೊಳ್ಳಲು ಸಮಯ ಬೇಕು; ರಾಮ್ ಮಾಧವ್

ಹಾರ್ಡ್ ಡಿಸ್ಕ್ ನಲ್ಲಿದ್ದ 'ಅಶ್ಲೀಲ' ವಿಡಿಯೋ ಡಿಲೀಟ್ ಮಾಡಲು ನಕಾರ: UPSC ಆಕಾಂಕ್ಷಿಯ ಹತ್ಯೆ! ಮೂವರ ಬಂಧನ

SCROLL FOR NEXT