ರಮಣ್ ಸಿಂಗ್ 
ದೇಶ

ಸೋಲಿನ ಹೊಣೆ ಹೊರುತ್ತೇನೆ, ಜನರ ಪ್ರೀತಿಗೆ ಅಭಾರಿ: ಛತ್ತೀಸ್ ಗಢ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮಣ್ ಸಿಂಗ್

ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಸತತ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

ರಾಯ್ ಪುರ: ಛತ್ತೀಸ್ ಗಢ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯ ಸತತ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. 
90 ಕ್ಷೇತ್ರಗಳಿರುವ ನಕ್ಸಲ್ ಪೀಡಿತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 67 ಸ್ಥಾನಗಳೊಂದಿಗೆ ಅಧಿಕಾರಕ್ಕೇರಿದರೆ, 18 ಸ್ಥಾನಗಳಿಕೆ ಕುಸಿದಿರುವ ಬಿಜೆಪಿ ಹೀನಾಯ ಸೋಲು ಕಂಡಿದೆ. ಸೋಲಿನ ಹಿನ್ನೆಲೆಯಲ್ಲಿ ಛತ್ತೀಸ್ ಗಢ ಸಿಎಂ ಸ್ಥಾನಕ್ಕೆ ರಮಣ್ ಸಿಂಗ್ ರಾಜೀನಾಮೆ ನೀಡಿದ್ದಾರೆ. 
ರಾಜೀನಾಮೆ ಬಳಿಕ ಪ್ರತಿಕ್ರಿಯೆ ನೀಡಿರುವ ರಮಣ್ ಸಿಂಗ್, "ಜನತೆ 3 ಬಾರಿ ಆಡಳಿತ ನಡೆಸಲು ಅವಕಾಶ ನೀಡಿದ್ದರು, ನನ್ನ ಜೀವನ ಪೂರ್ತಿ ಕೆಲಸ ಮಾಡಿದರೂ ಜನತೆ ನನಗೆ ನೀಡಿರುವ ಪ್ರೀತಿ ಗೌರವಗಳನ್ನು ಹಿಂತಿರುಗಿಸುವುದಕ್ಕೆ ಆಗುವುದಿಲ್ಲ". ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ.  ನನ್ನ ನೇತೃತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಿದ್ದು, ಸೋಲಿನ ಹೊಣೆಯನ್ನೂ ನಾನೇ ಹೊರುತ್ತೇನೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT