ಸಂಜಯ್ ಕಾಕಡೆ 
ದೇಶ

ರಾಮ ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಪಕ್ಷದ ಸೋಲಿಗೆ ಕಾರಣ: ಬಿಜೆಪಿ ಸಂಸದ

ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ....

ಮುಂಬೈ: ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ. ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಐದು ರಾಜ್ಯಗಳಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ.
ಫಲಿತಾಂಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಜಯ್ ಕಾಕಡೆ ಅವರು, ರಾಜಸ್ಥಾನ ಮತ್ತು ಛತ್ತೀಸ್ ಗಢದ ಸೋಲು ನಿರೀಕ್ಷಿತ. ಆದರೆ ಮಧ್ಯ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿರುವುದು ಅಚ್ಚರಿ ಮೂಡಿಸಿದೆ. ನಾವು ಅಭಿವೃದ್ಧಿ ವಿಚಾರ ಮರೆತು ರಾಮ ಮಂದಿರ ನಿರ್ಮಾಣಕ್ಕೆ, ಪ್ರತಿಮೆ ನಿರ್ಮಾಣಕ್ಕೆ ಮತ್ತು ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಆದ್ಯತೆ ನೀಡಿದ್ದೇ ಈ ಸೋಲಿಗೆ ಕಾರಣ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT