ಸಂಜಯ್ ಕಾಕಡೆ 
ದೇಶ

ರಾಮ ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಪಕ್ಷದ ಸೋಲಿಗೆ ಕಾರಣ: ಬಿಜೆಪಿ ಸಂಸದ

ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ....

ಮುಂಬೈ: ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ. ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಐದು ರಾಜ್ಯಗಳಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ.
ಫಲಿತಾಂಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಜಯ್ ಕಾಕಡೆ ಅವರು, ರಾಜಸ್ಥಾನ ಮತ್ತು ಛತ್ತೀಸ್ ಗಢದ ಸೋಲು ನಿರೀಕ್ಷಿತ. ಆದರೆ ಮಧ್ಯ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿರುವುದು ಅಚ್ಚರಿ ಮೂಡಿಸಿದೆ. ನಾವು ಅಭಿವೃದ್ಧಿ ವಿಚಾರ ಮರೆತು ರಾಮ ಮಂದಿರ ನಿರ್ಮಾಣಕ್ಕೆ, ಪ್ರತಿಮೆ ನಿರ್ಮಾಣಕ್ಕೆ ಮತ್ತು ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಆದ್ಯತೆ ನೀಡಿದ್ದೇ ಈ ಸೋಲಿಗೆ ಕಾರಣ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ