ಉತ್ತಮ್ ಕುಮಾರ್ ರೆಡ್ಡಿ 
ದೇಶ

ತೆಲಂಗಾಣ: ಗಾಂಧಿ ಕುಟುಂಬದ ನೀಲಿಗಣ್ಣಿನ ಹುಡುಗ ಉತ್ತಮ್ ಕುಮಾರ್ ರೆಡ್ಡಿ ಸಿಎಂ ಅಭ್ಯರ್ಥಿ?

ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಅಭ್ಯರ್ಥಿ ನಲಮಾಡ ಉತ್ತಮ್ ಕುಮಾರ್ ರೆಡ್ಡಿ ಎಂದು ..

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಅಭ್ಯರ್ಥಿ ನಲಮಾಡ ಉತ್ತಮ್ ಕುಮಾರ್ ರೆಡ್ಡಿ  ಎಂದು ಕಾಂಗ್ರೆಸ್ ಮುಖಂಡರು ಮಾತನಾಡಿಕೊಳ್ಳುತ್ತಿದ್ದಾರೆ.
ಸದ್ಯ ತೆಲಂಗಾಣ ಕಾಂಗ್ರೆಸ್ ಮತ ಎಣಿಕೆ ಕೇಂದ್ರಗಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗಲೇ ಸೋಮವಾರ ಕಾಂಗ್ರೆಸ್ ಹೈಕಮಾಂಡ್ ರೆಡ್ಡಿಗೆ ದೆಹಲಿಗೆ ಬುಲಾವ್ ನೀಡಿತ್ತು.  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಮತ್ತು ಅಶೋಕ್ ಗೆಹ್ಲೋಟ್ ಜೊತೆ ಚರ್ಚೆ ನಡೆಸಿದರು.
ಆದರೆ ಮಾತುಕತೆ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ, ಒಂದು ವೇಳೆ ಅತಂತ್ರ ವಿಧಾನಸಭೆ ನಿರ್ಮಾಣವಾದರೇ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ರಾಹುಲ್ ಗಾಂಧಿ ರೆಡ್ಡಿ ಪರವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉತ್ತಮ್ ಕುಮಾರ್ ರೆಡ್ಡಿ ಗಾಂಧಿ ಕುಟುಂಬದ ನೀಲಿಗಣ್ಣಿನ ಹುಡುಗ ಎಂದೇ ಪ್ರಸಿದ್ದಿಯಾಗಿದ್ದಾರೆ.  ಒಂದು ವೇಳೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಯಶಸ್ಸು ಗಳಿಸಿದರೇ  ಉತ್ತಮ್ ಕುಮಾರ್  ತೆಲಂಗಾಣ ಕಾಂಗ್ರೆಸ್ ಹೀರೋ  ಆಗಲಿದ್ದಾರೆ, 4 ಬಾರಿ ಹುಜೂರ್ ನಗರದಿಂದ ಶಾಸಕರಾಗಿ ಆಯ್ಕೆಯಾಗಿರುವ ರೆಡ್ಡಿ ಮೊದಲಿಗೆ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದರು. 
ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಿ ಕೆಲಸ ಮಾಡಿದ್ದಾರೆ. ಅವಿಭಜಿತ ಆಂಧ್ರಪ್ರದೇಶದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ, ಈ ಬಾರಿಯ ಚುನಾವಣೆಯಲ್ಲಿ ಗೆದ್ದರೇ ಸತತ ಐದನೇ ಬಾರಿ ವಿಜಯ ಸಾಧಿಸಿದಂತಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT