ಶಶಿ ತರೂರ್ 
ದೇಶ

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ ಶಶಿ ತರೂರ್

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ನವದೆಹಲಿ:  ಸುನಂದಾ ಪುಷ್ಕರ್  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ  ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ತಮ್ಮನ್ನು ಹತ್ಯೆ ಆರೋಪಿ ಎಂದು ಕರೆದಿದ್ದರಿಂದ ಬೇಷರತ್ತಾದ ಕ್ಷಮೆ ಕೋರಬೇಕೆಂದು ರವಿಶಂಕರ್ ಪ್ರಸಾದ್ ಅವರಿಗೆ ಶಶಿ ತರೂರ್  ಕಾನೂನು ನೋಟಿಸ್ ಕಳುಹಿಸಿದ್ದರು.  ಈಗ ತಿರುವನಂತಪುರಂನ  ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಸುನಂದಾ ಪುಷ್ಕರ್  ಹತ್ಯೆಯಿಂದ ಸಾವನ್ನಪ್ಪಿಲ್ಲ ಎಂಬುದು ಅಂತಿಮ ವರದಿಯಿಂದ ತಿಳಿದುಬಂದಿದೆ.ಈ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿ ಜಾಮೀನು ಪಡೆದುಕೊಂಡಿರುವುದಾಗಿ ಶಶಿ ತರೂರ್ ದೂರಿನಲ್ಲಿ ಹೇಳಿದ್ದಾರೆ.

ಕೇಂದ್ರಸರ್ಕಾರದ ಒತ್ತಡದಿಂದಾಗಿ ದೆಹಲಿ ಪೊಲೀಸರು  ತಮ್ಮ ಮೇಲೆ ಜಾರ್ಜ್ ಶೀಟ್ ದಾಖಲಿಸಿದ್ದರು ಎಂದು ಆರೋಪಿಸಿರುವ ಶಶಿ ತರೂರ್ , ಸುಳ್ಳು ಕೇಸಿನಲ್ಲಿ ತಮ್ಮನ್ನು ಸಿಲುಕಿಸಲು ಪಿತೂರಿ ನಡೆಸಲಾಗಿತ್ತು ಎಂದು ಹೇಳಿದ್ದಾರೆ.

ಅಕ್ಚೋಬರ್ 28 ರಂದು ರವಿಶಂಕರ್ ಪ್ರಸಾದ್ ಟ್ವೀಟರ್ ನಲ್ಲಿ ಹಾಕಿರುವ 2 ನಿಮಿಷ 18 ಸೆಕೆಂಡ್ ಗಳ ವಿಡಿಯೋ ಕ್ಲಿಪ್ ನಲ್ಲಿ ತಪ್ಪಾದ, ಮಾನನಷ್ಟ ಹೇಳಿಕೆಗಳನ್ನು ನೀಡಿದ್ದಾರೆ . ಇಂತಹ ಹೇಳಿಕೆಯಿಂದ ಸಾರ್ವಜನಿಕವಾಗಿ ತಮ್ಮ ಮಾನನಷ್ಟವಾಗಿರುವುದಾಗಿ ದೂರಿನಲ್ಲಿ ಶಶಿ ತರೂರ್ ಆಪಾದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT