ಜಯ್ ನಾರಾಯಣ್ ವ್ಯಾಸ 
ದೇಶ

ಆರ್ ಬಿಐ ನೂತನ ಗವರ್ನರ್ ಸಾಮರ್ಥ್ಯ ಪ್ರಶ್ನಿಸಿದ ಬಿಜೆಪಿ ನಾಯಕ!

ಭಾರತೀಯ ರಿಸರ್ವ್ ಬ್ಯಾಂಕಿನ ನೂತನ ಗವರ್ನರ್ ಆಗಿರುವ ಶಶಿಕಾಂತ್ ದಾಸ್ ಅವರ ಸಾಮರ್ಥ್ಯವನ್ನು ಬಿಜೆಪಿ ನಾಯಕ ಜಯ್ ನಾರಾಯಣ್ ವ್ಯಾಸ ಪ್ರಶ್ನಿಸಿದ್ದಾರೆ.

ಅಹ್ಮದಾಬಾದ್ : ಭಾರತೀಯ ರಿಸರ್ವ್ ಬ್ಯಾಂಕಿನ ನೂತನ ಗವರ್ನರ್ ಆಗಿ ನೇಮಕವಾಗಿರುವ ಶಶಿಕಾಂತ್ ದಾಸ್ ಅವರ ಸಾಮರ್ಥ್ಯವನ್ನು  ಬಿಜೆಪಿ ನಾಯಕ ಜಯ್ ನಾರಾಯಣ್ ವ್ಯಾಸ ಪ್ರಶ್ನಿಸಿದ್ದಾರೆ.

ಐಎಎಸ್ ಅಧಿಕಾರಿ ಬಗ್ಗೆಗೌರವವಿದೆ. ಆದರೆ , ಅವರು ಕೆಲವೊಂದು ಸಂಗತಿಗಳ ಬಗ್ಗೆ ಬೆಳಕು ಚೆಲ್ಲಿರಬಹುದು ಆದರೆ,  ಈ ಹಿಂದೆ ಇದ್ದ ಗವರ್ನರ್ ನಂತೆ  ಶಕ್ತಿಕಾಂತ್ ದಾಸ್ ಅವರನ್ನು ಅಂತಾರಾಷ್ಟ್ರೀಯ ಸಮುದಾಯ ಒಪ್ಪಿಕೊಳ್ಳಲಿದೆಯೇ , ಇಲ್ಲ ಎಂದು ಅವರು ಹೇಳಿದ್ದಾರೆ.

ಆರ್ ಬಿಐ ನಿರ್ವಹಣೆ ಮಾಡಬೇಕಾದರೆ  ದೇಶಿಯ ಹಾಗೂ ಅಂತಾರಾಷ್ಟ್ರೀಯ ಆರ್ಥಿಕತೆ ಬಗ್ಗೆ ಮುಕ್ತ ಜ್ಞಾನವಿರಬೇಕಾಗುತ್ತದೆ ಎಂದು  ಜಯ್ ನಾರಾಯಣ್ ಹೇಳಿದ್ದಾರೆ.

ಉರ್ಜಿತ್ ಪಟೇಲ್ ಆರ್ ಬಿಐ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡದ ಬಳಿಕ ಮಾಜಿ ಆರ್ಥಿಕ ವ್ಯವಹಾರ ಕಾರ್ಯದರ್ಶಿ ಹಾಗೂ 15 ನೇ ಹಣಕಾಸು ಆಯೋಗದ ಸದಸ್ಯ ಶಕ್ತಿಕಾಂತ್ ದಾಸ್ ಅವರನ್ನು ಕೇಂದ್ರಬ್ಯಾಂಕಿನ ಗವರ್ನರ್ ಆಗಿ ಸರ್ಕಾರ ನಿಯೋಜಿಸಿದೆ.

ಇತಿಹಾಸದಲ್ಲಿ ಮಾಸ್ಟರ್ ಡಿಗ್ರಿ ಹೊಂದಿರುವ  ಶಕ್ತಿಕಾಂತ್ ದಾಸ್  ನಿವೃತ್ತಿ ಸಂದರ್ಭದಲ್ಲಿ ದೊಡ್ಡ ಹುದ್ದೆ ದೊರಕಿದೆ. ಅಂತಹವರು ಆರ್ ಬಿಐಗೆ ಮಾರ್ಗದರ್ಶಕರಾಗಿ ಮೀಸಲು ಅಂತಹ ವಿವಾದಗಳಿಗೆ ಉತ್ತರಿಸಬಲ್ಲರೇ  ಎಂದು ಜಯ್ ನಾರಾಯಣ್ ವ್ಯಾಸ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT