ಸಾಂದರ್ಭಿಕ ಚಿತ್ರ 
ದೇಶ

ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಚಿವಾಲಯಗಳಿಗೆ ಸೂಚನೆ- ಜೀತೇಂದ್ರ ಸಿಂಗ್

ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು ಸದನ ಸಮಿತಿಯನ್ನು ಸ್ಥಾಪಿಸುವಂತೆ ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸೂಚನೆ ನೀಡಿದ್ದು, ಇಂತಹ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದೆ.

ನವದೆಹಲಿ: ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು  ಸದನ ಸಮಿತಿಯನ್ನು  ಸ್ಥಾಪಿಸುವಂತೆ ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ  ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ  ಸೂಚನೆ ನೀಡಿದ್ದು, ಇಂತಹ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿರುವ ಸಿಬ್ಬಂದಿ ಮತ್ತು ಸಾರ್ವಜನಿಕ ಆಡಳಿತ ಇಲಾಖೆ ಸಚಿವ ಜೀತೇಂದ್ರ ಸಿಂಗ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ  ಮೀಸಲಾತಿ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ  ಎಲ್ಲಾ ಸಚಿವಾಲಯಗಳು ಹಾಗೂ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಸಚಿವಾಲಯ, ಇಲಾಖೆಯೊಳಗೆ ವಿಶೇಷ ಮೀಸಲಾತಿ ಘಟಕ ಸ್ಥಾಪಿಸಲು ಸೂಚನೆ ನೀಡಲಾಗಿದೆ. ಆದಾಗ್ಯೂ, ಈ ವರ್ಗಗಳಿಗೆ ಕೇಂದ್ರ ಸರ್ಕಾರಿ ಸೇವೆಯಲ್ಲಿ ಖಾಲಿ ಇರುವ ಹುದ್ದೆಗಳ  ಬಗ್ಗೆ  ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಿಂದ  ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರಿ ಸೇವೆ ಹಾಗೂ ಹುದ್ದೆಗಳಲ್ಲಿ  ಪರಿಶಿಷ್ಟ ಜಾತಿಗೆ ಶೇ.15, ಪರಿಶಿಷ್ಟ ಪಂಗಡಕ್ಕೆ ಶೇ, 7.5 ಹಾಗೂ ಹಿಂದುಳಿದ ವರ್ಗಗಳಿಗೆ ಶೇ, 27 ರಷ್ಟು ಮೀಸಲಾತಿ ನೀಡಲಾಗುತ್ತಿದೆ. 78 ಸಚಿವಾಲಯ, ಇಲಾಖೆಗಳಿಂದ ಪಡೆದ ಮಾಹಿತಿ ಪ್ರಕಾರ  ಜನವರಿ 1, 2016ಲ್ಲಿ   ಪರಿಶಿಷ್ಟ ಜಾತಿಯ ಶೇ. 17. 49 , ಪರಿಶಿಷ್ಟ ಪಂಗಡದ ಶೇ. 8. 47 ಹಾಗೂ ಹಿಂದುಳಿದ ವರ್ಗದ ಶೇ, 21. 57 ರಷ್ಟು ಮಂದಿ ಕೇಂದ್ರ ಸರ್ಕಾರಿ ಸೇವೆ ಮತ್ತು ಹುದ್ದೆಗಳಲ್ಲಿ ಇರುವುದಾಗಿ ತಿಳಿದುಬಂದಿದೆ ಎಂದರು

ಮೂಲಗಳ ಪ್ರಕಾರ ಏಪ್ರಿಲ್ 1, 2012 ರಿಂದ ಡಿಸೆಂಬರ್ 31, 2016ರವರೆಗೂ 92, 589  ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 28, 713 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT