ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪತ್ರಕರ್ತ ಎಂ.ಜೆ ಅಕ್ಬರ್ ಹಾಗೂ ತರುಣ್ ತೇಜ್ಪಾಲ್ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ( ಭಾರತ ಸಂಪಾದಕರ ಸಂಘ) ದ ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ.
ತರುಣ್ ತೇಜ್ ಪಾಲ್ ತಮ್ಮ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದರೆ, ಎಂ.ಜೆ ಅಕ್ಬರ್ ಅವರ ಹೆಸರು #MeToo ಚಳುವಳಿಯಲ್ಲಿ ಬಹಿರಂಗವಾಗಿತ್ತು. ಈ ಹಿನ್ನಲೆಯಲ್ಲಿ ಆರೋಪ ಮುಕ್ತವಾಗುವವರೆಗೆ ಅವರನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ( ಭಾರತ ಸಂಪಾದಕರ ಸಂಘ)ದ ಸದಸ್ಯತ್ವದಿಂದ ಅವರನ್ನು ಅಮಾನತುನಲ್ಲಿಡಲಾಗಿದೆ ಎಂದು ತಿಳಿಸಿದೆ.
ಇತ್ತೀಚೆಗಷ್ಟೇ ಅಕ್ಬರ್ ಅವರು ಮೇಲೆ ಲೈಂಗಿಕ ಕಿರುಕುಳದ ಆರೋಪಗಳು ಬಂದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹುದ್ದೆಗೆ ರಾಜೀನಾಮೆ ನೀಡಿದ್ದರು