ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ 
ದೇಶ

ವಿರೋಧಿಗಳಿಗೆ 'ಪಪ್ಪು' ಆಗಿದ್ದ ರಾಹುಲ್ ಇದೀಗ ಅವರಿಗೆ ಪರಮ ಪೂಜ್ಯರಾಗಿ ಹೋಗಿದ್ದಾರೆ: ರಾಜ್ ಠಾಕ್ರೆ

ಒಮ್ಮೆ ವಿರೋಧ ಪಕ್ಷದ ನಾಯಕರಿಗೆ 'ಪಪ್ಪು' ಆಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಪರಮ ಪೂಜ್ಯರಾಗಿ ಹೋಗಿದ್ದಾರೆಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರು ಬುಧವಾರ ವ್ಯಂಗ್ಯವಾಡಿದ್ದಾರೆ...

ಮುಂಬೈ: ಒಮ್ಮೆ ವಿರೋಧ ಪಕ್ಷದ ನಾಯಕರಿಗೆ 'ಪಪ್ಪು' ಆಗಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಪರಮ ಪೂಜ್ಯರಾಗಿ ಹೋಗಿದ್ದಾರೆಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರು ಬುಧವಾರ ವ್ಯಂಗ್ಯವಾಡಿದ್ದಾರೆ. 
ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಜ್ ಠಾಕ್ರೆಯವರು, ಗುಜರಾತ್ ನಲ್ಲಿ ರಾಹುಲ್ ಒಬ್ಬರೇ ಇದ್ದರು, ಕರ್ನಾಟಕದಲ್ಲೂ ಒಂಟಿಯಾಗಿಯೇ ಇದ್ದರು. ಇದೀಗ ಪಪ್ಪು ಕೆಲವರಿಗೆ ಪರಮ ಪೂಜ್ಯರಾಗಿ ಹೋಗಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲೂ ಅವರ ನಾಯಕತ್ವನ್ನು ಒಪ್ಪಿಕೊಳ್ಳುತ್ತಾರಾ? ಅದನ್ನು ನೋಡೋಣ ಎಂದು ಹೇಳಿದ್ದಾರೆ. 
ಇದು ಆಗಲೇ ಬೇಕಿತ್ತು. ಅಮಿತ್ ಶಾ ಹಾಗೂ ಮೋದಿಯವರು ಕಳೆದ ನಾಲ್ಕು ವರ್ಷಗಳಿಂದ ನಡೆದುಕೊಂಡ ರೀತಿಯಿಂದಾಗಿ ಭಾರತ ಜನತೆಗೆ ಸ್ಪಷ್ಟ ಚಿತ್ರಣ ತೊರೆದಿದೆ. ರಾಮ ಮಂದಿರ ವಿಚಾರವನ್ನಿಟ್ಟುಕೊಂಡು ಆಟವಾಡಿದ್ದಾರೆಂಬುದು ಅವರಿಗೆ ತಿಳಿದಿದೆ. ಜನರು ಕೂಡ ಬುದ್ಧಿವಂತರೇ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT