ಸಂಗ್ರಹ ಚಿತ್ರ 
ದೇಶ

ಬಿಜೆಪಿ ಹಿನ್ನೆಡೆ ಮೋದಿ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ: ರಜನಿಕಾಂತ್

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿದ್ದು, ಇದು ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿದ್ದು, ಇದು ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ನಾಳೆ ಮುಂಬೈನಲ್ಲಿ ನಡೆಯಲಿರುವ ಉದ್ಯಮಿ ಮುಖೇಶ್​​ ಅಂಬಾನಿ ಪುತ್ರಿ ಇಶಾ ಅಂಬಾನಿ ಮದುವೆಗೆ ತೆರಳುತ್ತಿದ್ದ ವೇಳೆ ಚೆನ್ನೈ ಏರ್​ಪೋರ್ಟ್​​ನಲ್ಲಿ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯ ಫಲಿತಾಂಶದಿಂದ ಬಿಜೆಪಿ ತನ್ನ ಶಕ್ತಿ ಕಳೆದುಕೊಂಡಂತಹ ಲಕ್ಷಣಗಳು ಕಾಣಿಸುತ್ತಿವೆ ಎಂದು ಹೇಳಿದರು.
ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಇಮೇಜ್​ ಸಹ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನು ನಿನ್ನೆ ಪ್ರಕಟಗೊಂಡ ಪಂಚ ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ತನ್ನ ನಿಯಂತ್ರಣದಲ್ಲಿದ್ದ ಮಧ್ಯ ಪ್ರದೇಶ, ಛತ್ತೀಸ್ ಘಡ, ರಾಜಸ್ಥಾನದಲ್ಲಿ ಅಧಿಕಾರಿ ಕಳೆದುಕೊಂಡಿದೆ. ಅಂತೆಯೇ ತೆಲಂಗಾಣದಲ್ಲಿ ಟಿಆರ್ ಎಸ್ ಅಧಿಕಾರ ರಚನೆ ಮಾಡಲಿದ್ದು, ಮಿಜೋರಾಂ ನಲ್ಲಿ ಎಂಎನ್ಎಫ್ ಅಧಿಕಾರದ ಗದ್ದುಗೇರಿದೆ. ಆ ಮೂಲಕ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಹೇಳಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT