ಸಂಗ್ರಹ ಚಿತ್ರ 
ದೇಶ

ಬಿಜೆಪಿ ಹಿನ್ನೆಡೆ ಮೋದಿ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ: ರಜನಿಕಾಂತ್

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿದ್ದು, ಇದು ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯಾಗಿದ್ದು, ಇದು ಪ್ರಧಾನಿ ಮೋದಿ ಅವರ ವರ್ಚಸ್ಸು ಕಡಿಮೆಯಾಗಿರುವುದರ ಪ್ರತೀಕ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ನಾಳೆ ಮುಂಬೈನಲ್ಲಿ ನಡೆಯಲಿರುವ ಉದ್ಯಮಿ ಮುಖೇಶ್​​ ಅಂಬಾನಿ ಪುತ್ರಿ ಇಶಾ ಅಂಬಾನಿ ಮದುವೆಗೆ ತೆರಳುತ್ತಿದ್ದ ವೇಳೆ ಚೆನ್ನೈ ಏರ್​ಪೋರ್ಟ್​​ನಲ್ಲಿ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯ ಫಲಿತಾಂಶದಿಂದ ಬಿಜೆಪಿ ತನ್ನ ಶಕ್ತಿ ಕಳೆದುಕೊಂಡಂತಹ ಲಕ್ಷಣಗಳು ಕಾಣಿಸುತ್ತಿವೆ ಎಂದು ಹೇಳಿದರು.
ಅಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಇಮೇಜ್​ ಸಹ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನು ನಿನ್ನೆ ಪ್ರಕಟಗೊಂಡ ಪಂಚ ರಾಜ್ಯ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ತನ್ನ ನಿಯಂತ್ರಣದಲ್ಲಿದ್ದ ಮಧ್ಯ ಪ್ರದೇಶ, ಛತ್ತೀಸ್ ಘಡ, ರಾಜಸ್ಥಾನದಲ್ಲಿ ಅಧಿಕಾರಿ ಕಳೆದುಕೊಂಡಿದೆ. ಅಂತೆಯೇ ತೆಲಂಗಾಣದಲ್ಲಿ ಟಿಆರ್ ಎಸ್ ಅಧಿಕಾರ ರಚನೆ ಮಾಡಲಿದ್ದು, ಮಿಜೋರಾಂ ನಲ್ಲಿ ಎಂಎನ್ಎಫ್ ಅಧಿಕಾರದ ಗದ್ದುಗೇರಿದೆ. ಆ ಮೂಲಕ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಹೇಳಲಾಗುತ್ತಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮುಗ್ಗರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!

ಹಾರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಇರಾನ್ ಹೊಸ ಶುಲ್ಕ: ಮಿತ್ರ ರಾಷ್ಟ್ರಗಳಿಗೆ ಮಾತ್ರ ವಿಶೇಷ ಸೌಲಭ್ಯ..!

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!