ಆಸ್ಪತ್ರೆಗೆ ದಾಖಲಾದ ನಾಯಕರು 
ದೇಶ

ತೆಲಂಗಾಣ ಚುನಾವಣೆ: ಸೋತ ಆಘಾತಕ್ಕೆ ಇಬ್ಬರು ನಾಯಕರು ಆಸ್ಪತ್ರೆಗೆ ದಾಖಲು!

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹಲವು ನಾಯಕರಿಗೆ ಆಘಾತ ನೀಡಿದ್ದು, ತೆಲಂಗಾಣದಲ್ಲಿ ಸೋಲಿನ ಆಘಾತದಿಂದ ಇಬ್ಬರು ಪ್ರಬಲ ರಾಜಕೀಯ ನಾಯಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

ಹೈದರಾಬಾದ್: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹಲವು ನಾಯಕರಿಗೆ ಆಘಾತ ನೀಡಿದ್ದು, ತೆಲಂಗಾಣದಲ್ಲಿ ಸೋಲಿನ ಆಘಾತದಿಂದ ಇಬ್ಬರು ಪ್ರಬಲ ರಾಜಕೀಯ ನಾಯಕರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.
ಚುನಾವಣೆಯಲ್ಲಿ ಸೋತ ಆಘಾತದಿಂದ ದಿಢೀರ್ ಕುಸಿದು ಬಿದ್ದ ನಲಗೊಂಡಾ ಕಾಂಗ್ರೆಸ್ ಅಭ್ಯರ್ಥಿ ಕೋಮಟಿ ರೆಡ್ಡಿ ವೆಂಕಟ ರೆಡ್ಡಿ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರೀತಿ ಪಾಲೈರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಂಡಲಾ ಉಪೇಂದ್ರ ರೆಡ್ಡಿ ಅವರ ವಿರುದ್ಧ ಸೋಲು ಅನುಭವಿಸಿದ ಟಿಆರ್ ಎಸ್ ಅಭ್ಯರ್ಥಿ ತುಮ್ಮಲಾ ನಾಗೇಶ್ವರ್ ರಾವ್ ಅವರನ್ನು ಕೂಡಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ವೆಂಕಟ ರೆಡ್ಡಿ ರಕ್ತದೊತ್ತಡ ಹೆಚ್ಚಾಗಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ನಿಯಮಿತ ತಪಾಸಣೆಗಾಗಿ ಆಸ್ಪತ್ರೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಟಿಆರ್ ಎಸ್ ಅಭ್ಯರ್ಥಿ ಕಂಚಾರ್ಲಾ ಭೂಪಾಲ್ ರೆಡ್ಡಿ ಎದುರು ವೆಂಕಟ ರೆಡ್ಡಿ ಅವರು 8,633 ಮತಗಳ ಅಂತರದಿಂದ ಸೋತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT