ಪ್ರಮಾಣ ವಚನ ಸ್ವೀಕರಿಸಿದ ಕೆಸಿಆರ್ 
ದೇಶ

ತೆಲಂಗಾಣ ನೂತನ ಸಿಎಂ ಆಗಿ ಕೆ ಚಂದ್ರಶೇಖರ್ ರಾವ್ ಪ್ರಮಾಣ ವಚನ ಸ್ವೀಕಾರ

ತೆಲಂಗಾಣದ ನೂತನ ಸಿಎಂ ಆಗಿ ಟಿಆರ್ ಎಸ್ ಅಧಿನಾಯಕ ಕೆ ಚಂದ್ರಶೇಖರ ರಾವ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹೈದರಾಬಾದ್: ತೆಲಂಗಾಣದ ನೂತನ ಸಿಎಂ ಆಗಿ ಟಿಆರ್ ಎಸ್ ಅಧಿನಾಯಕ ಕೆ ಚಂದ್ರಶೇಖರ ರಾವ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹೈದರಾಬಾದ್ ನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ ಚಂದ್ರಶೇಖರ ರಾವ್ ಅವರು ದೈವ ಸಾಕ್ಷಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಚಂದ್ರಶೇಖರ ರಾವ್ ಅವರಿಗೆ ರಾಜ್ಯಪಾಲ ನರಸಿಂಹನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಇನ್ನು ಚಂದ್ರಶೇಖರ ರಾವ್ ಅವರೊಂದಿಗೆ ಟಿಆರ್ ಎಸ್ ಹಿರಿಯ ಶಾಸಕ ಮಹಮದ್ ಅಲಿ ಅವರೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಂಪೂರ್ಣ ಪ್ರಮಾಣದ ಮಂತ್ರಿಮಂಡಲವನ್ನು ಇದೇ ಡಿಸೆಂಬರ್ 18ರಂದು ರಚಿಸುವುದಾಗಿಯೂ ಅಂದೇ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಆರ್ ಎಸ್ ಮೂಲಗಳು ತಿಳಿಸಿವೆ.
ಇನ್ನು ಕಳೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಟಿಆರ್ ಎಸ್ ಪಕ್ಷ 88 ಸ್ಥಾನಗಳಲ್ಲಿ ಜಯಭೇರಿ ಭಾರಿಸುವ ಮೂಲಕ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಿದೆ. ಅಲ್ಲದೆ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಗೆದ್ದಿದ್ದ ಶಾಸಕರೂ ಕೂಡ ಸಿಎಂ ಕೆಸಿಆರ್ ನೇತೃತ್ವದ ಟಿಆರ್ ಎಸ್ ಸರ್ಕಾರಕ್ಕೆ ತಮ್ಮ ಬೆಂಬಲ ಘೋಷಿಸಿರುವುದು ವಿಶೇಷ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT