ಸಂಗ್ರಹ ಚಿತ್ರ 
ದೇಶ

ರಫೇಲ್ ಯುದ್ಧ ವಿಮಾನ ಖರೀದಿ ತನಿಖೆಗೆ 'ಸುಪ್ರೀಂ' ನಕಾರ: ಎಲ್ಲಾ ಅರ್ಜಿಗಳ ವಜಾ

ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದ್ದು...

ನವದೆಹಲಿ: ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದ್ದು, ಇದರಿಂದ ಕೇಂದ್ರದ ಆಡಳಿತಾರೂಢ ಪ್ರಧಾನಿ ಮೋದಿ ಸರ್ಕಾರಕ್ಕೆ ನಿರಾಳಗೊಂಡಂತಾಗಿದೆ. 
ಯುದ್ಧ ವಿಮಾನ ಖರೀದಿ ಒಪ್ಪಂದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್.ಶರ್ಮಾ ಹಾಗೂ ಎನ್'ಜಿಒ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. 
ಇಂದು ತೀರ್ಪು ಪ್ರಕಟಿಸಿರುವ ನ್ಯಾಯಪೀಠ ತನಿಖೆಗೆ ಅಸಮ್ಮತಿ ಸೂಚಿಸಿದ್ದು, ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿದೆ. ವಿಮಾನ ಖರೀದಿ ಪ್ರಕ್ರಿಯೆಯು ನಮಗೆ ತೃಪ್ತಿಯನ್ನು ತಂದಿದೆ. ಒಪ್ಪಂದ ಕುರಿತು ಯಾವುದೇ ರೀತಿಯ ಸಂಶಯಗಳೂ ಮೂಡುತ್ತಿಲ್ಲ. ಯಾವುದೇ ರೀತಿಯ ಸಿದ್ಥತೆಗಳಿಲ್ಲದೆ ಒಂದು ದೇಶ ಇರಲು ಸಾಧ್ಯವಿಲ್ಲ. 126 ಯುದ್ಧ ವಿಮಾನಗಳನ್ನೇ ಖರೀದಿ ಮಾಡುವಂತೆ ಸರ್ಕಾರಕ್ಕೆ ನಾವು ಒತ್ತಾಯ ಮಾಡಲು ಸಾಧ್ಯವಿಲ್ಲ. ಪ್ರತೀಯೊಂದು ಭಾಗದಲ್ಲೂ ಅಂಶಗಳಲ್ಲೂ ನ್ಯಾಯಾಲಯ ಪರಿಶೀಲನೆ ನಡೆಸುವುದು ಸರಿಯಲ್ಲ. ಬೆಲೆ ಹೋಲಿಕೆ ಮಾಡುವುದು ನ್ಯಾಯಾಲಯದ ಕೆಲಸವೂ ಅಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT