ಜ್ಯೋತಿರಾಧಿತ್ಯ ಸಿಂಧಿಯಾ 
ದೇಶ

ತೀರ್ಪಿನಿಂದ ಹಿನ್ನಡೆಯಾಗಿಲ್ಲ, ರಫೇಲ್ ವಿವಾದ ಜನರ ನ್ಯಾಯಾಲಯದಲ್ಲಿದೆ: ಜ್ಯೋತಿರಾದಿತ್ಯ ಸಿಂಧಿಯಾ

ಸುಪ್ರೀಂ ತೀರ್ಪಿನಿಂದ ಹಿನ್ನಡೆಯಾಗಿಲ್ಲ, ರಫೇಲ್ ವಿವಾದ ಜನರ ನ್ಯಾಯಾಲದಲ್ಲಿದೆ, ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ...

ನವದೆಹಲಿ: ಸುಪ್ರೀಂ ತೀರ್ಪಿನಿಂದ ಹಿನ್ನಡೆಯಾಗಿಲ್ಲ, ರಫೇಲ್ ವಿವಾದ ಜನರ ನ್ಯಾಯಾಲದಲ್ಲಿದೆ, ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಹೇಳಿದ್ದಾರೆ.
ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಆದರೆ ಇದರಿಂದ ಕಾಂಗ್ರೆಸ್ ಗೆ ಹಿನ್ನಡೆಯಾಗಿಲ್ಲ, ಜನರ ನ್ಯಾಯಾಲಯದಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ರಫೇಲ್ ಡೀಲ್ ವಿವಾದ ಸಂಬಂಧ ಜಂಟಿ ಸಂಸದೀಯ ಸಮಿತಿ ರಚಿಸಿ ತನಿಖೆ ನಡೆಸುವಂತೆ ಸಂಸತ್ತಿನಲ್ಲಿ ಒತ್ತಾಯಿಸುವುದಾಗಿ ಹೇಳಿದ್ದಾರೆ.
ಯುದ್ಧ ವಿಮಾನ ಖರೀದಿ ಒಪ್ಪಂದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ವಕೀಲ ಎಂ.ಎಲ್.ಶರ್ಮಾ ಹಾಗೂ ಎನ್'ಜಿಒ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT