ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ, ಸೋನಿಯಾ ಗಾಂಧಿ 
ದೇಶ

ನಾಳೆ ಕರುಣಾನಿಧಿ ಪ್ರತಿಮೆ ಅನಾವರಣ: ಪ್ರತಿಪಕ್ಷಗಳಿಂದ ಶಕ್ತಿ ಪ್ರದರ್ಶನ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮಾಜಿ ಮುಖ್ಯಸ್ಥ ದಿವಂಗತ ಎಂ.ಕರುಣಾನಿಧಿ ಅವರ ಪ್ರತಿಮೆಯನ್ನು ಭಾನುವಾರ...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮಾಜಿ ಮುಖ್ಯಸ್ಥ ದಿವಂಗತ ಎಂ.ಕರುಣಾನಿಧಿ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಲಾಗುತ್ತಿದ್ದು, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ರಾಷ್ಟ್ರಮಟ್ಟದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಬಿಜೆಪಿ ನೇತೃತ್ವದ ಎನ್ ಡಿಎ ವಿರುದ್ಧ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.
ಡಿಎಂಕೆ ಪಕ್ಷದ ಕಚೇರಿ ಮುಂಭಾಗದಲ್ಲಿರುವ  ಡಿಎಂಕೆ ಸಂಸ್ಥಾಪಕ ಸಿಎನ್ ಅಣ್ಣಾದೊರೈ ಅವರ ಪ್ರತಿಮೆ ಪಕ್ಕದಲ್ಲೇ ಕರುಣಾನಿಧಿ ಅವರ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ಅದನ್ನು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರ ಉಪಸ್ಥಿತಿಯಲ್ಲಿ  ಸೋನಿಯಾ ಗಾಂಧಿ ಅವರು ನಾಳೆ ಅನಾವರಣಗೊಳಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಕೇರಳ ಮುಖ್ಯಮಂತ್ರಿ ಪಿಣರಾಜ್ಯ ವಿಜಯನ್, ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಹಾಗೂ ಸಿಪಿಐ, ಸಿಪಿಐಎಂ, ಎಂಎಂಕೆ ಸೇರಿದಂತೆ ಹಲವು ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ.
ಪ್ರತಿಮೆ ಅನಾವರಣಗೊಳಿಸಿದ ಬಳಿಕ ವೈಎಂಸಿಎ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು, ಇಲ್ಲಿ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಉದ್ದೇಶಿತ ಮಹಾಮೈತ್ರಿಗೆ ಒಂದು ಆಕಾರ ನೀಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!