ಮಲ್ಲಿಕಾರ್ಜುನ ಖರ್ಗೆ 
ದೇಶ

ರಾಫೆಲ್ ಒಪ್ಪಂದದ ಬಗ್ಗೆ ಸಿಎಜಿ ವರದಿಯ ವಿವರಗಳನ್ನು ಪಡೆಯಲು ಪಿಎಸಿಗೆ ಖರ್ಗೆ ಒತ್ತಾಯ

ರಾಫೆಲ್ ಡೀಲ್ ಕುರಿತು ತನಿಖೆಗೆ ನಿರಾಕರಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಒಂದು ದಿನದ ಬಳಿಕ ಪಬ್ಲಿಕ್ ಅಕೌಂಟ್ಸ್ ಕಮಿಟಿಯ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆಶನಿವಾರ....

ನವದೆಹಲಿ: ರಾಫೆಲ್ ಒಪ್ಪಂದದ ಕುರಿತು ಸಿಎಜಿ ವರದಿ ಸಂಸತ್ತಿನಲ್ಲಿ ಎಂದು ಮಂಡನೆಯಾಗಿದೆ ಎಂದು ಟಾರ್ನಿ ಜನರಲ್ ಮತ್ತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರನ್ನು ಕೇಳಬೇಕು ಬ್ಲಿಕ್ ಅಕೌಂಟ್ಸ್ ಕಮಿಟಿಯ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ  ಮಲ್ಲಿಕಾರ್ಜುನ ಖರ್ಗೆಹೇಳಿದರು.
ರಾಫೆಲ್ ಡೀಲ್ ಕುರಿತು ತನಿಖೆಗೆ ನಿರಾಕರಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಒಂದು ದಿನದ ಬಳಿಕ  ಶನಿವಾರ ಲೋಕಸಭೆಯಲ್ಲಿ ಸಾರ್ವಜನಿಕ ಲೆಕ್ಕ ಪರಿಶೋಧಕರ ವರದಿಯನ್ನು ಸಲ್ಲಿಸಿದ ಸಂದರ್ಭದಲ್ಲಿ ಖರ್ಗೆ ಈ ಮಾತು ಕೇಳಿದ್ದಾರೆ.
ರಾಫೆಲ್ ಒಪ್ಪಂದದ ಕುರಿತ ಸಿಎಜಿ ವರದಿ ಸಂಬಂಧ ಸರ್ಕಾರವು ಸುಪ್ರೀಂ ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದೆ ಎಂದು ಆರೋಪಿಸಿದ ಖರ್ಗೆ ಸರ್ಕಾರ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಾವು ಸುಪ್ರೀಂ ಕೋರ್ಟ್ ಅನ್ನು ಗೌರವಿಸುವುದಾಗಿ ಹೇಳಿದ ಖರ್ಗೆ "ಇದು ತನಿಖಾ ಸಂಸ್ಥೆಯಿಂದ ತನಿಖೆ ಮಾಡಬೇಕಾದ ವಿಚಾರವಲ್ಲ. ಬದಲಾಗಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಾಫೆಲ್ ಒಪ್ಪಂದದ ಕುರಿತು ತನಿಖೆ ನಡೆಸಬಹುದು ಎಂದಿದ್ದಾರೆ.
ರಾಫೆಲ್ ಒಪ್ಪಂದದ ಕುರಿತು ಸಿಎಜಿ ವರದಿಯನ್ನು ಸಂಸತ್ತಿನಲ್ಲಿ ಎಂದು ಮಂಡಿಸಲಾಗಿದೆ ಎಂದು ಅಟಾರ್ನಿ ಜನರಲ್ (ಎಜಿ) ಮತ್ತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಅವರನ್ನು ಕೇಳಲು  ಪಿಎಸಿ ಸದಸ್ಯರನ್ನು ನಾನು  ಒತ್ತಾಯಿಸುತ್ತೇನೆ ಎಂದು ಖರ್ಗೆ ಸುದ್ದಿಗಾರರಿಗೆ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಹೇಳಿದಂತೆ ರಾಫೆಲ್ ಕುರಿತ ಸಿಎಜಿ ವರದಿ ಸಂಸತ್ತಿನಲ್ಲಿ ಮಂಡನೆಯಾಗಿ ಪಿಎಸಿ ಯಲ್ಲಿ ಚರ್ಚಿಸಲಾಗಿದೆ ಎಂಬ ಸುಪ್ರೀಂ ಹೇಳಿಕೆಯನ್ನು ಖರ್ಗೆ ಉಲ್ಲೇಖಿಸಿದ್ದರು.
ಸಿಎಜಿ ವರದಿಯನ್ನು ಪಿಎಸಿ ಚರ್ಚಿಸಿದೆ ಎನ್ನುವುದು ತಪ್ಪು ಮಾಹಿತಿ, ಕೋರ್ಟ್ ಗೆ ಸರ್ಕಾರ ಈ ರೀತಿಯಾಗಿ ತಪ್ಪು ಮಾಹಿತಿ ನೀಡಿರುವುದು ಆಘಾತಕಾರಿ ವಿಷಯವಾಗಿದೆ.ಹೀಗಾಗಿ ಸಿಎಜಿ ವರದಿ ಕುರಿಇತು ತಾನು ತಪ್ಪು ಮಾಹಿತಿ ನೀಡಿರುವ ಸರ್ಕಾರ ತಕ್ಷಣ ಕ್ಷಮೆ ಕೋರಬೇಕು  ಎಂದು ಅವರು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT