ಸಾಂದರ್ಭಿಕ ಚಿತ್ರ 
ದೇಶ

ಪಕ್ಷ ಅಧಿಕಾರಕ್ಕೆ ಬಂದರೆ ಯುಪಿ ಮಾದರಿಯಲ್ಲಿ ಎನ್ ಕೌಂಟರ್: ಪಶ್ಚಿಮ ಬಂಗಾಳ ಬಿಜೆಪಿ ನಾಯಕಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶೈಲಿಯಲ್ಲಿ ಎನ್ ಕೌಂಟರ್ ಗೆ ...

ಕೊಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶೈಲಿಯಲ್ಲಿ ಎನ್ ಕೌಂಟರ್ ಗೆ ಆದೇಶಿಸಲಾಗುವುದು ಎಂದು ಬಿಜೆಪಿ  ಉಪಾಧ್ಯಕ್ಷೆ ರಾಜಕುಮಾರಿ ಕೇಶರಿ ಹೇಳಿದ್ದಾರೆ.
ಬುರ್ದ್ವಾನ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕೆ ಸಮಾರಂಭದಲ್ಲಿ ಮಾತನಾಡಿದ ಅವರು, ಎನ್ ಕೌಂಟರ್ ಮಾಡಬೇಕಾದ ವ್ಯಕ್ತಿಗಳ ಪಟ್ಟಿ ಸಿದ್ದ ಪಡಿಸುವಂತೆ ಕೇಂದ್ರ ನಾಯಕರುಗಳು ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೂ ರಾಜಕುಮಾರಿ ಕೇಶರಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಗೂಂಡಾ ರಾಜ್ಯ ನಿರ್ಮೂಲನೆ ಮಾಡಲು ಇರುವ ಒಂದೇ ದಾರಿ ಎನ್ ಕೌಂಟರ್ ಆಗಿದೆ. ಹೀಗಾಗಿ ಕೇಸರಿ ಈ ರೀತಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಕೇವಲ ಆಕೆ ಮಾತ್ರವಲ್ಲ ನಾನು ಹಾಗೂ  ಬಿಜೆಪಿ ಕಾರ್ಯದರ್ಶಿ ಸಾಯಂತಂ ಕೂಡ ಇದೇ ಮಾತನ್ನು ಈ ಮೊದಲು ಹೇಳಿದ್ದೆವು.  ರಾಜ್ಯದಲ್ಲಿ ಅಪರಾಧ ತಡೆಗಟ್ಟಲು ಇರುವ ದಾರಿ ಇದೊಂದೇ, ಗಂಗಾಜಲ ಮೂಲಕ ನಾವು ಇದನ್ನು ಶುಚಿಗೊಳಿಸಲು ಸಾಧ್ಯವಿಲ್ಲ, ಆಕೆಯ ವಿರುದ್ಧ ಯಾವುದೇ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT