ಶಿವಸೇನೆ 
ದೇಶ

'ಯೆಸ್-ಮ್ಯಾನ್ ದಾಸ್' ಆರ್ ಬಿಐ ಗೌರ್ನರ್ ಹುದ್ದೆಯಲ್ಲಿ ಅಪಾಯಕಾರಿ: ಶಿವಸೇನೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆಗಳನ್ನು ಪ್ರತಿಪಕ್ಷಗಳಂತೆಯೇ ತೀಕ್ಷ್ಣವಾಗಿ ಟೀಕಿಸುವ ಎನ್ ಡಿಎ ಮಿತ್ರಪಕ್ಷ ಶಿವಸೇನೆ...

ಮುಂಬೈ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆಗಳನ್ನು ಪ್ರತಿಪಕ್ಷಗಳಂತೆಯೇ ತೀಕ್ಷ್ಣವಾಗಿ ಟೀಕಿಸುವ ಎನ್ ಡಿಎ ಮಿತ್ರಪಕ್ಷ ಶಿವಸೇನೆ, ಈಗ ಶಕ್ತಿಕಾಂತ್ ದಾಸ್ ಅವರನ್ನು ಆರ್ ಬಿಐ ಗೌರ್ನರ್ ಆಗಿ ನೇಮಕ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಟೀಕಿಸಿದೆ. 
ಶಕ್ತಿಕಾಂತ್ ದಾಸ್ ಆರ್ ಬಿಐ ಗೌರ್ನರ್ ಆಗಿ ಆರ್ಥಿಕ ಭಯೋತ್ಪಾದನೆ ಉಂಟಾಗುವಂತೆ ಮಾಡುವ ಸಾಧ್ಯತೆಗಳಿವೆ, ಬಿಜೆಪಿ ಸರ್ಕಾರ ಸತ್ಯವನ್ನು ಮಾತನಾಡುವವರನ್ನು ಇಷ್ಟಪಡುವುದಿಲ್ಲ. ಅವರು ಹೇಳಿದ್ದಕ್ಕೆ ತಲೆ ಅಲ್ಲಾಡಿಸುವವರು ಮಾತ್ರ ಬಿಜೆಪಿಗೆ ಬೇಕಾಗಿದ್ದಾರೆ. ಆರ್ ಬಿಐ ಗೌರ್ನರ್ ನ್ನಾಗಿ ಶಕ್ತಿಕಾಂತ್ ದಾಸ್ ಅವರ ನೇಮಕದಲ್ಲೂ ಇದೇ ಉದ್ದೇಶವಿದ್ದರೆ ಇದು ದೇಶದಲ್ಲಿ ಆರ್ಥಿಕ ಭಯೋತ್ಪಾದನೆಗೆ ಸಿಗುತ್ತಿರುವ ಸುಳಿವು ಎಂದು ಶಿವಸೇನೆ ಹೇಳಿದೆ. 
ಈ ಹಿಂದಿನ ಇಬ್ಬರು ಆರ್ ಬಿಐ ಗೌರ್ನರ್ ಗಳು ಅರ್ಥಶಾಸ್ತ್ರದ ಹಿನ್ನೆಲೆಯುಳ್ಳವರೇ ಆಗಿದ್ದರು. ಆದರೆ ಈಗ ಬಂದಿರುವವರು ಅರ್ಥಶಾಸ್ತ್ರದ ಬಗ್ಗೆ ಹೆಚ್ಚು ಅರಿವಿಲ್ಲದಿರುವ ಐಎಎಸ್ ಅಧಿಕಾರಿಯಷ್ಟೇ ಎಂದು ಅರ್ ಬಿಐ ಗೌರ್ನರ್ ಸ್ಥಾನಕ್ಕೇರಿರುವ ಶಿವಸೇನೆ ಶಕ್ತಿಕಾಂತ್ ದಾಸ್ ಅವರ ಹಿನ್ನೆಲೆಯನ್ನು ಪ್ರಶ್ನಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT