ಸಾಂದರ್ಭಿಕ ಚಿತ್ರ 
ದೇಶ

1984 ಸಿಖ್ ವಿರೋಧಿ ದಳ್ಳುರಿ: ನಾಳೆ ದೆಹಲಿ ಹೈಕೋರ್ಟ್ ತೀರ್ಪು ಪ್ರಕಟ?

1984ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ತೀರ್ಪನ್ನು ದೆಹಲಿ ಹೈಕೋರ್ಟ್ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.

ನವದೆಹಲಿ: 1984ರಲ್ಲಿ ನಡೆದಿದ್ದ ಸಿಖ್ ವಿರೋಧಿ ದಂಗೆಗೆ  ಸಂಬಂಧಿಸಿದಂತೆ  ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್  ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ತೀರ್ಪನ್ನು  ದೆಹಲಿ ಹೈಕೋರ್ಟ್ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.
ಸಿಖ್ ವಿರೋಧಿ ದಂಗೆ, ಸಂತ್ರಸ್ತರು ಹಾಗೂ ಆರೋಪಿಗಳ ಬಗ್ಗೆ ಸಿಬಿಐ  ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು  ಅಕ್ಟೋಬರ್ 29 ರಂದು ಪೂರ್ಣಗೊಳಿಸಿದ  ನ್ಯಾಯಾಧೀಶರಾದ ಎಸ್. ಮುರಳೀಧರ್ ಹಾಗೂ ವಿನೋದ್ ಗೋಯಲ್ ಅವರನ್ನೊಳಗೊಂಡ ನ್ಯಾಯಪೀಠ ತೀರ್ಪನ್ನು ಕಾಯ್ದಿರಿಸಿದೆ.
ಇಂದಿರಾಗಾಂಧಿ ಹತ್ಯೆ ನಡೆದ ನಂತರ 1984 ನವೆಂಬರ್ 1 ರಂದು ದೆಹಲಿಯ ಕಂಟೋನ್ಮೆಂಟ್ ಬಳಿಕ ರಾಜ್ ನಗರದಲ್ಲಿ ಒಂದೇ ಕುಟುಂಬದ ಐವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ  ಮಾಜಿ ಕಾಂಗ್ರೆಸ್ ಕೌನ್ಸಿಲರ್ ಬಲ್ವನ್ ಖೊಕಾರ್, ನಿವೃತ್ತ ನೌಕದಳ ಸಿಬ್ಬಂದಿ ಬಾಗ್ ಮಲ್ , ಗಿರ್ ದಾರಿ ಲಾಲ್   ಮತ್ತಿಬ್ಬರು  ದೋಷಿಗಳೆಂದು ವಿಚಾರಣಾ ನ್ಯಾಯಾಲಯ ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿದೆ. ಆದರೆ. ಖೊಕಾರ್, ಭಾಗ್ ಮಲ್ ಮತ್ತು ಲಾಲ್ ಗೆ ಜೀವಾಧಿ ಶಿಕ್ಷೆ ವಿಧಿಸಿದ್ದು, ಮಾಜಿ ಶಾಸಕ ಮಹೇಂದ್ರ ಯಾದವ್ ಮತ್ತು ಕಿಶನ್ ಕೊಕಾರ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಪರಾಧಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅಲ್ಲದೇ ಸಜ್ಜನ್ ಕುಮಾರ್ ಅವರ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಕೂಡಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT