ಕಾಮಗಾರಿ ವೀಕ್ಷಿಸಿದ ಗೋವಾ ಸಿಎಂ ಪರಿಕ್ಕರ್ 
ದೇಶ

ವೈದ್ಯರ ಸಲಹೆ ಹೊರತಾಗಿಯೂ ಮೂಗಿಗೆ ಹಾಕಿದ್ದ ಪೈಪ್ ನೊಂದಿಗೇ ಕಾಮಗಾರಿ ವೀಕ್ಷಣೆ ಮಾಡಿದ ಗೋವಾ ಸಿಎಂ ಪರಿಕ್ಕರ್

ಅನಾರೋಗ್ಯದಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಭಾನುವಾರ ದಿಢೀರ್ ಪ್ರತ್ಯಕ್ಷರಾಗುವ ಮೂಲಕ ಅಚ್ಚರಿ ಮೂಡಿಸಿದರು.

ಪಣಜಿ: ಅನಾರೋಗ್ಯದಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಭಾನುವಾರ ದಿಢೀರ್ ಪ್ರತ್ಯಕ್ಷರಾಗುವ ಮೂಲಕ ಅಚ್ಚರಿ ಮೂಡಿಸಿದರು.
ದೆಹಲಿಯ ಎಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಿಕ್ಕರ್ ಅವರು ನಿನ್ನೆ ಡಿಸ್ಚಾರ್ಜ್ ಆಗಿದ್ದರು. ವೈದ್ಯರೂ ಕೂಡ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಆದರೆ ಪರಿಕ್ಕರ್ ಅವರು ಮಾತ್ರ ಗೋವಾಗೆ ವಾಪಸ್ ಆಗುತ್ತಿದ್ದಂತೆಯೇ ಎರಡು ಮೈಲ್ಸೇತುವೆಗಳ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. 
ಮಂಡೋವಿ ನದಿಯ ನಿರ್ಮಾಣ ಹಂತದ ಸೇತುವೆಯನ್ನು ಪರಿಕ್ಕರ್ ಪರಿಶೀಲಿಸಿದ್ದು, ಕಾಮಗಾರಿ ಬಳಿ ಕಾರಿನಲ್ಲಿ ಬಂದ ಗೋವಾ ಸಿಎಂ ಗೋವಾ ಇನ್ ಫ್ರಾಸ್ಟ್ರಕ್ಚರ್ ಡೆವಲಪ್ ಮೆಂಟ್ ಕಾರ್ಪೊರೇಷನ್ ಅಧಿಕಾರಿಗಳ ಬಳಿ ಕೆಲಸದ ಪ್ರಗತಿ ಹಾಗೂ ಒಪ್ಪಂದದ ಕುರಿತು ಚರ್ಚೆ ನಡೆಸಿದರು. ಅಂತೆಯೇ ಜುವಾರಿ ನದಿಗೆ ಅಗಸ್ಸೈಮ್ ಗ್ರಾಮದಲ್ಲಿ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಕಾಮಗಾರಿಯನ್ನೂ ಕೂಡ ಪರಿಕ್ಕರ್ ವೀಕ್ಷಣೆ ಮಾಡಿದರು. ಈ ಎರಡೂ ಸೇತುವೆಗಳ ಕಾಮಗಾರಿ ಮುಂದಿನ ವರ್ಷ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸಿಎಂ ಪರಿಕ್ಕರ್ ಅವರು ವಿದೇಶದಲ್ಲಿ ಚಿಕಿತ್ಸೆ ಪಡೆದುಕೊಂಡು ಭಾರತಕ್ಕೆ ಆಗಮಿಸಿದ್ದು, ಕಳೆದ 9 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಹಲವು ದಿನಗಳಿಂದ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಳ್ಳದೆ ಮನೆಯಲ್ಲೇ ಚೇತರಿಸಿಕೊಳ್ಳುತ್ತಿದ್ದರು. ಆದರೆ ಇದಕ್ಕೆ ವಿರೊಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯದ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ. ಇಂತಹ ಪರಿಸ್ಥಿತಿಯಲ್ಲ ಮಧ್ಯ ಪ್ರವೇಶಿಸಬೇಕಾದ ರಾಜ್ಯಪಾಲರು ಯಾವುದೆ ಪರ್ಯಾಯ ಆಲೋಚನೆ ಮಾಡುತ್ತಿಲ್ಲ ಎಂದು ಆರೋಪಿಸುತ್ತಿದೆ.
ಅಷ್ಟೇ ಅಲ್ಲದೇ ವಿರೋಧ ಪಕ್ಷಗಳು ಸಿಎಂ ಪರಿಕ್ಕರ್ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಬೇಕೆಂದು ರಾಜ್ಯಪಾರಿಗೆ ಮನವಿ ಮಾಡಿದ್ದರು. ಇದೀಗ ಹಲವು ದಿನಗಳ ಬಳಿಕ ಆಸ್ಪತ್ರೆಯಿಂದ ಬಂದು ಸಾರ್ವಜನಿಕವಾಗಿ ಕಾಣಿಸಿಕೊಂಡು ವಿರೋಧ ಪಕ್ಷದವರ ಬಾಯಿ ಮುಚ್ಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT