ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಜ್ಜನ್ ಕುಮಾರ್ ರಾಜೀನಾಮೆ: ರಾಹುಲ್ ಗೆ ಪತ್ರ 
ದೇಶ

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಜ್ಜನ್ ಕುಮಾರ್ ರಾಜೀನಾಮೆ: ರಾಹುಲ್ ಗೆ ಪತ್ರ

1984 ರ ಸಿಖ್ ವಿರೋಧಿ ಹತ್ಯಾಕಾಂಡದ ಅಪರಾಧಿ ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: 1984 ರ ಸಿಖ್ ವಿರೋಧಿ ಹತ್ಯಾಕಾಂಡದ ಅಪರಾಧಿ ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 
ಪಕ್ಷದ ಮೂಲಗಳ ಪ್ರಕಾರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಸಜ್ಜನ್ ಕುಮಾರ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. "ನನ್ನ ವಿರುದ್ಧ ದೆಹಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ನಾನು ಈ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ಸಜ್ಜನ್ ಕುಮಾರ್ ತಿಳಿಸಿದ್ದಾರೆ. 
ಇಂದಿರಾ ಗಾಂಧಿ ಹತ್ಯೆಯ ನಂತರ 1984 ರಲ್ಲಿ ಸಿಖ್ ವಿರೋಧಿ ದಂಗೆಯಲ್ಲಿ ಸಜ್ಜನ್ ಕುಮಾರ್ ಪಾತ್ರ ಸಾಬೀತಾಗಿದ್ದರಿಂದ, ಪ್ರಕರಣದಲ್ಲಿ ಆತ ದೋಷಿ ಎಂದು ದೆಹಲಿ ಹೈಕೋರ್ಟ್ ಡಿ.17 ರಂದು  ತೀರ್ಪು ಪ್ರಕಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT